ದೇಶ- ವಿದೇಶ

ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆ ಮಾಡುತ್ತೇವೆ: ರಾಹುಲ್‌ ಗಾಂಧಿ

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತೇವೆ. ಲ್ಯಾಟರಲ್‌ ಎಂಟ್ರಿಯಂತಹ ಬಿಜೆಪಿಯ ಸಂಚನ್ನು ವಿಫಲಗೊಳಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೇಕಡಾ 50ರ ಮೀಸಲಾತಿ ಮಿತಿಯನ್ನು ತೆರವುಗೊಳಿಸುವ ಮೂಲಕ ನಾವು ಜಾತಿ ಜನಗಣತಿಯ ಆಧಾರದ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಲಿದ್ದೇವೆ. ನಾವು ಸಂವಿಧಾನ ಉಳಿಸಿಕೊಳ್ಳಲು ಹಗಲಿರುಳು ಶ್ರಮ ವಹಿಸುತ್ತೇವೆ. ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆಯೇ ನಮ್ಮ ಮುಂದಿನ ಗುರಿ ಎಂದು ಭರವಸೆ ನೀಡಿದರು.

ಇನ್ನು ಸರ್ಕಾರದ ಉನ್ನತ ಹುದ್ದೆಗಳಿಗೆ ಲ್ಯಾಟರಲ್‌ ಎಂಟ್ರಿ ಮೂಲಕ ಖಾಸಗಿ ವಲಯದ ತಜ್ಞರು ಹಾಗೂ ಪರಿಣಿತರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್‌ ಹಾಗೂ ವಿಪಕ್ಷಗಳು ವಿರೋಧಿಸಿದ್ದವು. ಅಲ್ಲದೇ ಲ್ಯಾಟರಲ್‌ ಎಂಟ್ರಿ ಕ್ರಮವು ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ನಡೆ ಎಂದು ಆರೋಪಿಸಿದ್ದವು.

ಆಗಸ್ಟ್.‌17ರಂದು ಯುಪಿಎಸ್‌ಸಿ 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪಕಾರ್ಯದರ್ಶಿಗಳನ್ನು ಲ್ಯಾಟರಲ್‌ ಎಂಟ್ರಿ ಮೂಲಕ ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿತು.

ಇದನ್ನು ಸರ್ಕಾರಿ ಇಲಾಖೆಗಳಲ್ಲಿ ತಜ್ಞರ ನೇಮಕಾತಿ ಎಂದು ಉಲ್ಲೇಖಿಸಲಾಗುತ್ತದೆ. ಈ ನಿರ್ಧಾರವು ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳ ಮೀಸಲಾತಿ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

41 mins ago

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

6 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

7 hours ago