ನವದೆಹಲಿ: ತಮ್ಮ ಲೋಕಸಭಾ ಭಾಷಣದ ಭಾಗಗಳ ಮರುಸೇರ್ಪಡೆಗೆ ಒತ್ತಾಯಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸ್ಪೀಕರ್ಗೆ ಪತ್ರ ಬರೆದಿದ್ದಾರೆ.
ಲೋಕಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೊದಲ ಬಾರಿಗೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಹಿಂದೂಗಳು ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಯವರು ಹಿಂಸಾಚಾರಿಗಳು ಎಂದಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಭಾಗವನ್ನು ಅವರ ಭಾಷಣದಿಂದ ತೆಗೆದುಹಾಕಲಾಗಿತ್ತು. ಇದಕ್ಕೆ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಭಾಷಣದ ಭಾಗಗಳನ್ನು ಪುನಃ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.
ಜುಲೈ.2024ರ ಅಧ್ಯಕ್ಷರ ವಿಳಾಸದ ಮೇಲಿನ ಧನ್ಯವಾದಗಳ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ನನ್ನ ಭಾಷಣದಿಂದ ತೆಗೆದುಹಾಕಲಾದ ಟೀಕೆಗಳ ಹಿನ್ನೆಲೆಯಲ್ಲಿ ನಾನು ಇದನ್ನು ಬರೆಯುತ್ತಿದ್ದೇನೆ. ಸದನದ ನಡಾವಳಿಗಳಿಂದ ಕೆಲವು ಟೀಕೆಗಳನ್ನು ಹೊರಹಾಕುವ ಅಧಿಕಾರವನ್ನು ಸ್ಪೀಕರ್ ವಜಾಗೊಳಿಸುತ್ತಾರೆ. ನನ್ನ ಭಾಷಣದ ಗಣನೀಯ ಭಾಗವನ್ನು ಉಚ್ಛಾರಣೆಯ ಉಡುಪಿನ ಅಡಿಯಲ್ಲಿ ಪ್ರಕ್ರಿಯೆಯಿಂದ ಸರಳವಾಗಿ ತೆಗೆದುಹಾಕಿರುವ ವಿಧಾನವನ್ನು ಗಮನಿಸಲು ನಾನು ಆಘಾತಕ್ಕೊಳಗಾಗಿದ್ದೇನೆ ಎಂದಿದ್ದಾರೆ.
ಆರೋಪಗಳಿಂದ ತುಂಬಿರುವ ಅನುರಾಗ್ ಠಾಕೂರ್ ಅವರ ಭಾಷಣದ ಒಂದೇ ಒಂದು ಪದವನ್ನು ಹೊರಹಾಕಿಲ್ಲ ಎಂದು ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ನನ್ನ ಭಾಷಣದ ಬಹುಪಾಲು ಭಾಗವನ್ನು ಸದನದ ಕಲಾಪದಿಂದ ಉಚ್ಚಾಟನೆಯ ರೀತಿಯಲ್ಲಿ ಕತ್ತರಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…