ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಹಸ್ತಲಾಘವ ಮಾಡುವ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರಿಗೆ ತಲೆ ಬಾಗಿಸಿದ್ದನ್ನು ರಾಹುಲ್ ಪ್ರಶ್ನಿಸಿದರು. ಈ ವೇಳೆ ಓಂ ಬಿರ್ಲಾ ಹಾಗೂ ರಾಹುಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಲೋಕಸಭಾ ಸ್ಪೀಕರ್ ಆಯ್ಕೆ ದಿನವನ್ನು ಉಲ್ಲೇಖಿಸಿ, ನಾನು ನಿಮ್ಮೊಂದಿಗೆ ಕೈಕುಲುಕಿದಾಗ ನೀವು ನೇರವಾಗಿ ನಿಂತು ನನ್ನ ಕೈಕುಲುಕಿದ್ದೀರಿ. ಆದರೆ ಮೋದಿಜಿ ಕೈಕುಲುಕಿದಾಗ ತಲೆಬಾಗಿ ನಮಸ್ಕರಿಸಿ ಕೈಕುಲುಕಿದ್ದೀರಿ ಎಂದು ಸ್ಪೀಕರ್ ಓಂ ಬಿರ್ಲಾ ಅವರನ್ನು ರಾಹುಲ್ ಪ್ರಶ್ನಿಸಿದ್ರು.
ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್, ಮೋದಿ ಅವರು ನಮಗಿಂತ ಹಿರಿಯರು, ಹಿರಿಯರಿಗೆ ತಲೆಬಾಗಿ ನಮಸ್ಕರಿಸಿ ಗೌರವ ನೀಡುವುದು ನಮ್ಮ ಸಂಸ್ಕೃತಿಯಾಗಿದೆ. ನಾನು ಈ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅನುಸರಿಸುತ್ತೇನೆ. ಹಿರಿಯರಿಗೆ ನಮಸ್ಕರಿಸುವುದು ಹಾಗೂ ಅಗತ್ಯವಿದ್ದರೆ ಅವರ ಪಾದಗಳನ್ನು ಮುಟ್ಟುವುದು ಕೂಡ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದರು.
ಸ್ಪೀಕರ್ನ ಈ ಮಾತಿಗೆ ಪ್ರತಿಕ್ರಿಯಿಸಿದ ರಾಗ, ಸ್ಪೀಕರ್ ಅವರ ಮಾತನ್ನು ಗೌರವಿಸುತ್ತೇನೆ. ಆದರೆ ಈ ಸದನದಲ್ಲಿ ನಿಮಗಿಂತ ದೊಡ್ಡವರು ಯಾರಿಲ್ಲ. ಇಲ್ಲಿ ನಿಮ್ಮ ಮಾತೇ ಕೊನೆಯದು. ಎಲ್ಲರೂ ಕೂಡ ನಿಮ್ಮನ್ನು ಗೌರವಿಸಬೇಕು. ಇಡೀ ಪ್ರತಿಪ್ರಕ್ಷಗಳು ನಿಮ್ಮ ಮುಂದೆ ತಲೆಬಾಗುತ್ತವೆ. ಸದನದಲ್ಲಿ ನಿಷ್ಪಕ್ಷಪಾತವಾಗಿರುವುದು ಮುಖ್ಯ ಎಂದು ಹೇಳಿದ್ದಾರೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…