ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಹಸ್ತಲಾಘವ ಮಾಡುವ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರಿಗೆ ತಲೆ ಬಾಗಿಸಿದ್ದನ್ನು ರಾಹುಲ್ ಪ್ರಶ್ನಿಸಿದರು. ಈ ವೇಳೆ ಓಂ ಬಿರ್ಲಾ ಹಾಗೂ ರಾಹುಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಲೋಕಸಭಾ ಸ್ಪೀಕರ್ ಆಯ್ಕೆ ದಿನವನ್ನು ಉಲ್ಲೇಖಿಸಿ, ನಾನು ನಿಮ್ಮೊಂದಿಗೆ ಕೈಕುಲುಕಿದಾಗ ನೀವು ನೇರವಾಗಿ ನಿಂತು ನನ್ನ ಕೈಕುಲುಕಿದ್ದೀರಿ. ಆದರೆ ಮೋದಿಜಿ ಕೈಕುಲುಕಿದಾಗ ತಲೆಬಾಗಿ ನಮಸ್ಕರಿಸಿ ಕೈಕುಲುಕಿದ್ದೀರಿ ಎಂದು ಸ್ಪೀಕರ್ ಓಂ ಬಿರ್ಲಾ ಅವರನ್ನು ರಾಹುಲ್ ಪ್ರಶ್ನಿಸಿದ್ರು.
ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್, ಮೋದಿ ಅವರು ನಮಗಿಂತ ಹಿರಿಯರು, ಹಿರಿಯರಿಗೆ ತಲೆಬಾಗಿ ನಮಸ್ಕರಿಸಿ ಗೌರವ ನೀಡುವುದು ನಮ್ಮ ಸಂಸ್ಕೃತಿಯಾಗಿದೆ. ನಾನು ಈ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅನುಸರಿಸುತ್ತೇನೆ. ಹಿರಿಯರಿಗೆ ನಮಸ್ಕರಿಸುವುದು ಹಾಗೂ ಅಗತ್ಯವಿದ್ದರೆ ಅವರ ಪಾದಗಳನ್ನು ಮುಟ್ಟುವುದು ಕೂಡ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದರು.
ಸ್ಪೀಕರ್ನ ಈ ಮಾತಿಗೆ ಪ್ರತಿಕ್ರಿಯಿಸಿದ ರಾಗ, ಸ್ಪೀಕರ್ ಅವರ ಮಾತನ್ನು ಗೌರವಿಸುತ್ತೇನೆ. ಆದರೆ ಈ ಸದನದಲ್ಲಿ ನಿಮಗಿಂತ ದೊಡ್ಡವರು ಯಾರಿಲ್ಲ. ಇಲ್ಲಿ ನಿಮ್ಮ ಮಾತೇ ಕೊನೆಯದು. ಎಲ್ಲರೂ ಕೂಡ ನಿಮ್ಮನ್ನು ಗೌರವಿಸಬೇಕು. ಇಡೀ ಪ್ರತಿಪ್ರಕ್ಷಗಳು ನಿಮ್ಮ ಮುಂದೆ ತಲೆಬಾಗುತ್ತವೆ. ಸದನದಲ್ಲಿ ನಿಷ್ಪಕ್ಷಪಾತವಾಗಿರುವುದು ಮುಖ್ಯ ಎಂದು ಹೇಳಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…