ದೇಶ- ವಿದೇಶ

ಮೋದಿಗೆ ತಲೆ ಬಾಗಿದ ಸ್ಪೀಕರ್‌ ನಡೆಗೆ ರಾಹುಲ್‌ ಆಕ್ಷೇಪ..

ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಹಸ್ತಲಾಘವ ಮಾಡುವ ವೇಳೆ ಸ್ಪೀಕರ್‌ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರಿಗೆ ತಲೆ ಬಾಗಿಸಿದ್ದನ್ನು ರಾಹುಲ್‌ ಪ್ರಶ್ನಿಸಿದರು. ಈ ವೇಳೆ ಓಂ ಬಿರ್ಲಾ ಹಾಗೂ ರಾಹುಲ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಲೋಕಸಭಾ ಸ್ಪೀಕರ್‌ ಆಯ್ಕೆ ದಿನವನ್ನು ಉಲ್ಲೇಖಿಸಿ, ನಾನು ನಿಮ್ಮೊಂದಿಗೆ ಕೈಕುಲುಕಿದಾಗ ನೀವು ನೇರವಾಗಿ ನಿಂತು ನನ್ನ ಕೈಕುಲುಕಿದ್ದೀರಿ. ಆದರೆ ಮೋದಿಜಿ ಕೈಕುಲುಕಿದಾಗ ತಲೆಬಾಗಿ ನಮಸ್ಕರಿಸಿ ಕೈಕುಲುಕಿದ್ದೀರಿ ಎಂದು ಸ್ಪೀಕರ್‌ ಓಂ ಬಿರ್ಲಾ ಅವರನ್ನು ರಾಹುಲ್‌ ಪ್ರಶ್ನಿಸಿದ್ರು.

ರಾಹುಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್‌,  ಮೋದಿ ಅವರು ನಮಗಿಂತ ಹಿರಿಯರು, ಹಿರಿಯರಿಗೆ ತಲೆಬಾಗಿ ನಮಸ್ಕರಿಸಿ ಗೌರವ ನೀಡುವುದು ನಮ್ಮ ಸಂಸ್ಕೃತಿಯಾಗಿದೆ. ನಾನು ಈ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅನುಸರಿಸುತ್ತೇನೆ. ಹಿರಿಯರಿಗೆ ನಮಸ್ಕರಿಸುವುದು ಹಾಗೂ ಅಗತ್ಯವಿದ್ದರೆ ಅವರ ಪಾದಗಳನ್ನು ಮುಟ್ಟುವುದು ಕೂಡ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದರು.

ಸ್ಪೀಕರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ ರಾಗ, ಸ್ಪೀಕರ್‌ ಅವರ ಮಾತನ್ನು ಗೌರವಿಸುತ್ತೇನೆ. ಆದರೆ ಈ ಸದನದಲ್ಲಿ ನಿಮಗಿಂತ ದೊಡ್ಡವರು ಯಾರಿಲ್ಲ. ಇಲ್ಲಿ ನಿಮ್ಮ ಮಾತೇ ಕೊನೆಯದು. ಎಲ್ಲರೂ ಕೂಡ ನಿಮ್ಮನ್ನು ಗೌರವಿಸಬೇಕು. ಇಡೀ ಪ್ರತಿಪ್ರಕ್ಷಗಳು ನಿಮ್ಮ ಮುಂದೆ ತಲೆಬಾಗುತ್ತವೆ. ಸದನದಲ್ಲಿ ನಿಷ್ಪಕ್ಷಪಾತವಾಗಿರುವುದು ಮುಖ್ಯ ಎಂದು ಹೇಳಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

3 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

4 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

4 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

4 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

4 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

4 hours ago