ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಹಸ್ತಲಾಘವ ಮಾಡುವ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರಿಗೆ ತಲೆ ಬಾಗಿಸಿದ್ದನ್ನು ರಾಹುಲ್ ಪ್ರಶ್ನಿಸಿದರು. ಈ ವೇಳೆ ಓಂ ಬಿರ್ಲಾ ಹಾಗೂ ರಾಹುಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಲೋಕಸಭಾ ಸ್ಪೀಕರ್ ಆಯ್ಕೆ ದಿನವನ್ನು ಉಲ್ಲೇಖಿಸಿ, ನಾನು ನಿಮ್ಮೊಂದಿಗೆ ಕೈಕುಲುಕಿದಾಗ ನೀವು ನೇರವಾಗಿ ನಿಂತು ನನ್ನ ಕೈಕುಲುಕಿದ್ದೀರಿ. ಆದರೆ ಮೋದಿಜಿ ಕೈಕುಲುಕಿದಾಗ ತಲೆಬಾಗಿ ನಮಸ್ಕರಿಸಿ ಕೈಕುಲುಕಿದ್ದೀರಿ ಎಂದು ಸ್ಪೀಕರ್ ಓಂ ಬಿರ್ಲಾ ಅವರನ್ನು ರಾಹುಲ್ ಪ್ರಶ್ನಿಸಿದ್ರು.
ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್, ಮೋದಿ ಅವರು ನಮಗಿಂತ ಹಿರಿಯರು, ಹಿರಿಯರಿಗೆ ತಲೆಬಾಗಿ ನಮಸ್ಕರಿಸಿ ಗೌರವ ನೀಡುವುದು ನಮ್ಮ ಸಂಸ್ಕೃತಿಯಾಗಿದೆ. ನಾನು ಈ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅನುಸರಿಸುತ್ತೇನೆ. ಹಿರಿಯರಿಗೆ ನಮಸ್ಕರಿಸುವುದು ಹಾಗೂ ಅಗತ್ಯವಿದ್ದರೆ ಅವರ ಪಾದಗಳನ್ನು ಮುಟ್ಟುವುದು ಕೂಡ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದರು.
ಸ್ಪೀಕರ್ನ ಈ ಮಾತಿಗೆ ಪ್ರತಿಕ್ರಿಯಿಸಿದ ರಾಗ, ಸ್ಪೀಕರ್ ಅವರ ಮಾತನ್ನು ಗೌರವಿಸುತ್ತೇನೆ. ಆದರೆ ಈ ಸದನದಲ್ಲಿ ನಿಮಗಿಂತ ದೊಡ್ಡವರು ಯಾರಿಲ್ಲ. ಇಲ್ಲಿ ನಿಮ್ಮ ಮಾತೇ ಕೊನೆಯದು. ಎಲ್ಲರೂ ಕೂಡ ನಿಮ್ಮನ್ನು ಗೌರವಿಸಬೇಕು. ಇಡೀ ಪ್ರತಿಪ್ರಕ್ಷಗಳು ನಿಮ್ಮ ಮುಂದೆ ತಲೆಬಾಗುತ್ತವೆ. ಸದನದಲ್ಲಿ ನಿಷ್ಪಕ್ಷಪಾತವಾಗಿರುವುದು ಮುಖ್ಯ ಎಂದು ಹೇಳಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…