ದೇಶ- ವಿದೇಶ

ಮೋದಿಗೆ ತಲೆ ಬಾಗಿದ ಸ್ಪೀಕರ್‌ ನಡೆಗೆ ರಾಹುಲ್‌ ಆಕ್ಷೇಪ..

ನವದೆಹಲಿ: ಲೋಕಸಭೆ ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿಯ ಭಾಷಣ ಆಡಳಿತ ಪಕ್ಷಗಳಿಗೆ ನುಂಗಲಾದ ತುತ್ತಾಗಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಹಸ್ತಲಾಘವ ಮಾಡುವ ವೇಳೆ ಸ್ಪೀಕರ್‌ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರಿಗೆ ತಲೆ ಬಾಗಿಸಿದ್ದನ್ನು ರಾಹುಲ್‌ ಪ್ರಶ್ನಿಸಿದರು. ಈ ವೇಳೆ ಓಂ ಬಿರ್ಲಾ ಹಾಗೂ ರಾಹುಲ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಲೋಕಸಭಾ ಸ್ಪೀಕರ್‌ ಆಯ್ಕೆ ದಿನವನ್ನು ಉಲ್ಲೇಖಿಸಿ, ನಾನು ನಿಮ್ಮೊಂದಿಗೆ ಕೈಕುಲುಕಿದಾಗ ನೀವು ನೇರವಾಗಿ ನಿಂತು ನನ್ನ ಕೈಕುಲುಕಿದ್ದೀರಿ. ಆದರೆ ಮೋದಿಜಿ ಕೈಕುಲುಕಿದಾಗ ತಲೆಬಾಗಿ ನಮಸ್ಕರಿಸಿ ಕೈಕುಲುಕಿದ್ದೀರಿ ಎಂದು ಸ್ಪೀಕರ್‌ ಓಂ ಬಿರ್ಲಾ ಅವರನ್ನು ರಾಹುಲ್‌ ಪ್ರಶ್ನಿಸಿದ್ರು.

ರಾಹುಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್‌,  ಮೋದಿ ಅವರು ನಮಗಿಂತ ಹಿರಿಯರು, ಹಿರಿಯರಿಗೆ ತಲೆಬಾಗಿ ನಮಸ್ಕರಿಸಿ ಗೌರವ ನೀಡುವುದು ನಮ್ಮ ಸಂಸ್ಕೃತಿಯಾಗಿದೆ. ನಾನು ಈ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅನುಸರಿಸುತ್ತೇನೆ. ಹಿರಿಯರಿಗೆ ನಮಸ್ಕರಿಸುವುದು ಹಾಗೂ ಅಗತ್ಯವಿದ್ದರೆ ಅವರ ಪಾದಗಳನ್ನು ಮುಟ್ಟುವುದು ಕೂಡ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದರು.

ಸ್ಪೀಕರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ ರಾಗ, ಸ್ಪೀಕರ್‌ ಅವರ ಮಾತನ್ನು ಗೌರವಿಸುತ್ತೇನೆ. ಆದರೆ ಈ ಸದನದಲ್ಲಿ ನಿಮಗಿಂತ ದೊಡ್ಡವರು ಯಾರಿಲ್ಲ. ಇಲ್ಲಿ ನಿಮ್ಮ ಮಾತೇ ಕೊನೆಯದು. ಎಲ್ಲರೂ ಕೂಡ ನಿಮ್ಮನ್ನು ಗೌರವಿಸಬೇಕು. ಇಡೀ ಪ್ರತಿಪ್ರಕ್ಷಗಳು ನಿಮ್ಮ ಮುಂದೆ ತಲೆಬಾಗುತ್ತವೆ. ಸದನದಲ್ಲಿ ನಿಷ್ಪಕ್ಷಪಾತವಾಗಿರುವುದು ಮುಖ್ಯ ಎಂದು ಹೇಳಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

3 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

7 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

10 hours ago