ಮುಂಬೈ: ಮಹಾರಾಷ್ಟ್ರದ ಜಲಂಗಾವ್ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ.
ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ವಿವರ:
ಮೊದಲು ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿಕೊಂಡಿತ್ತು. ಈ ಬಿಸಿಗಾಳಿಯನ್ನೇ ಬೆಂಕಿ ಎಂದು ಭಾವಿಸಿದ ಪ್ರಯಾಣಿಕರು ರೈಲಿನ ಚೈನ್ ಎಳೆದು ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಅಪಾಯದಿಂದ ಪಾರಾಗಲು ಪ್ರಯಾಣಿಕರು ರೈಲಿನಿಂದ ಕೆಳಕ್ಕೆ ಜಿಗಿದು ಮತ್ತೊಂದು ಹಳಿಗೆ ಬಿದ್ದಿದ್ದಾರೆ. ಈ ವೇಳೆಗಾಗಲೇ ಕರ್ನಾಟಕ ಎಕ್ಸ್ಪ್ರೆಸ್ ರೈಲು ಬಂದಿದ್ದು, ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಇದರಿಂದ ಈ ಘಟನೆ ಸಂಭವಿಸಿದೆ.
ಇನ್ನು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ಎಕ್ಸ್ಪ್ರೆಸ್ ಬರುತ್ತಿದ್ದರೆ, ಪುಷ್ಪಕ್ ಎಕ್ಸ್ಪ್ರೆಸ್ ರೈಲು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಮುಂಬೈಗೆ ಬರುತ್ತಿತ್ತು.
ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಸಾವನ್ನಪ್ಪಿರುವವರಲ್ಲಿ ಮುಂಬೈ ಮೂಲದವರೇ ಹೆಚ್ಚು ಎಂದು ಅಂದಾಜಿಸಲಾಗಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…