ದೇಶ- ವಿದೇಶ

ಮಹಾರಾಷ್ಟ್ರದಲ್ಲಿ ಘೋರ ರೈಲು ದುರಂತ: ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 20 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಜಲಂಗಾವ್‌ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ.

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ವಿವರ:
ಮೊದಲು ಪುಷ್ಪಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿಕೊಂಡಿತ್ತು. ಈ ಬಿಸಿಗಾಳಿಯನ್ನೇ ಬೆಂಕಿ ಎಂದು ಭಾವಿಸಿದ ಪ್ರಯಾಣಿಕರು ರೈಲಿನ ಚೈನ್‌ ಎಳೆದು ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಈ ವೇಳೆ ಅಪಾಯದಿಂದ ಪಾರಾಗಲು ಪ್ರಯಾಣಿಕರು ರೈಲಿನಿಂದ ಕೆಳಕ್ಕೆ ಜಿಗಿದು ಮತ್ತೊಂದು ಹಳಿಗೆ ಬಿದ್ದಿದ್ದಾರೆ. ಈ ವೇಳೆಗಾಗಲೇ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಬಂದಿದ್ದು, ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಇದರಿಂದ ಈ ಘಟನೆ ಸಂಭವಿಸಿದೆ.

ಇನ್ನು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ಎಕ್ಸ್‌ಪ್ರೆಸ್‌ ಬರುತ್ತಿದ್ದರೆ, ಪುಷ್ಪಕ್‌ ಎಕ್ಸ್‌ಪ್ರೆಸ್‌ ರೈಲು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಮುಂಬೈಗೆ ಬರುತ್ತಿತ್ತು.

ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಸಾವನ್ನಪ್ಪಿರುವವರಲ್ಲಿ ಮುಂಬೈ ಮೂಲದವರೇ ಹೆಚ್ಚು ಎಂದು ಅಂದಾಜಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

15 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago