ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ ಒಂದೇ ಕಡೆ ಲಭ್ಯವಾಗಲಿವೆ. ‘ರೈಲ್ಒನ್’ ಆಪ್ನಲ್ಲಿ ಪ್ರಯಾಣಿಕರಿಗೆ ಹಲವು ಆಯ್ಕೆಗಳಿದ್ದು, ರೈಲ್ವೆ ಸೇವೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ.
ಇದರಲ್ಲಿ ಹಲವು ಸೌಲಭ್ಯಗಳ ಆಯ್ಕೆಗಳಿದ್ದು, ರೈಲ್ವೆ ಪ್ರಯಾಣವನ್ನು ಸುಗಮಗೊಳಿಸುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ‘ರೈಲ್ಒನ್’ ಆಪ್ ಮೂಲಕ ಪ್ರಯಾಣಿಕರು, ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಕಾಯ್ದಿರಿಸಿದ ಟಿಕೆಟ್, ಕಾಯ್ದಿರಿಸದ ಟಿಕೆಟ್ ಹಾಗೂ ಪ್ಲಾಟ್ ಫಾರ್ಮ್ ಟಿಕೆಟ್, ಸೀಸನ್ ಟಿಕೆಟ್ಗಳನ್ನು ಕಾಯ್ದಿರಿಸಬಹುದಾಗಿದೆ. ಇದರೊಂದಿಗೆ ರೈಲುಗಳ ಹುಡುಕಾಟ, ಪಿಎನ್ಆರ್ ಸ್ಥಿತಿ, ಕೋಚ್ ವಿವರ ಮತ್ತು ರೈಲು ಎಲ್ಲಿದೆ ಎಂಬ ನೈಜ ಸಮಯದ ಮಾಹಿತಿ ಸೇರಿದಂತೆ ಹಲವು ಸುಧಾರಿತ ವೈಶಿಷ್ಟ್ಯಗಳು ಈ ಆಪ್ನಲ್ಲಿ ಲಭ್ಯವಿದೆ.
‘ರೈಲ್ಒನ್’ ಆಪ್ ಮೂಲಕ ಕಾಯ್ದಿರಿಸದ ಟಿಕೆಟ್ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ ಶೇ.3ರಷ್ಟು ರಿಯಾಯಿತಿ ಲಭಿಸಲಿದೆ. ಈ ಆಪ್ನಲ್ಲಿ ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ರೀತಿಯ ಡಿಜಿಟಲ್ ಪಾವತಿ ಆಯ್ಕೆಗಳನ್ನು ಬಳಸಿ ಟಿಕೆಟ್ಗಳನ್ನು ಕಾಯ್ದಿರಿಸಬಹುದಾಗಿದೆ.
ರೈಲ್ಒನ್ ಆಪ್ ಗೂಗಲ್ ಪ್ಲೇ ಸ್ಟೋರ್ ಮತ್ತು ಐಒಎಸ್ ಆಪ್ ಸ್ಟೋರ್ ನಲ್ಲಿ ಉಚಿತವಾಗಿ ಲಭ್ಯವಿದೆ. ಭಾರತೀಯ ರೈಲ್ವೆಯು ತನ್ನ ಹಳೆಯ ‘ಯುಟಿಎಸ್ ಆನ್ ಮೊಬೈಲ್’ ಆಪ್ ಸೇವೆಗಳನ್ನು 2026ರ ಮಾರ್ಚ್ 1, ಹಂತ ಹಂತವಾಗಿ ಸ್ಥಗಿತಗೊಳಿಸಲಿದೆ.
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…