ದೇಶ- ವಿದೇಶ

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ ಒಂದೇ ಕಡೆ ಲಭ್ಯವಾಗಲಿವೆ. ‘ರೈಲ್‌ಒನ್’ ಆಪ್‌ನಲ್ಲಿ ಪ್ರಯಾಣಿಕರಿಗೆ ಹಲವು ಆಯ್ಕೆಗಳಿದ್ದು, ರೈಲ್ವೆ ಸೇವೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ.

ಇದರಲ್ಲಿ ಹಲವು ಸೌಲಭ್ಯಗಳ ಆಯ್ಕೆಗಳಿದ್ದು, ರೈಲ್ವೆ ಪ್ರಯಾಣವನ್ನು ಸುಗಮಗೊಳಿಸುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ‘ರೈಲ್‌ಒನ್’ ಆಪ್ ಮೂಲಕ ಪ್ರಯಾಣಿಕರು, ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಕಾಯ್ದಿರಿಸಿದ ಟಿಕೆಟ್, ಕಾಯ್ದಿರಿಸದ ಟಿಕೆಟ್ ಹಾಗೂ ಪ್ಲಾಟ್ ಫಾರ್ಮ್ ಟಿಕೆಟ್, ಸೀಸನ್ ಟಿಕೆಟ್‌ಗಳನ್ನು ಕಾಯ್ದಿರಿಸಬಹುದಾಗಿದೆ. ಇದರೊಂದಿಗೆ ರೈಲುಗಳ ಹುಡುಕಾಟ, ಪಿಎನ್‌ಆರ್ ಸ್ಥಿತಿ, ಕೋಚ್ ವಿವರ ಮತ್ತು ರೈಲು ಎಲ್ಲಿದೆ ಎಂಬ ನೈಜ ಸಮಯದ ಮಾಹಿತಿ ಸೇರಿದಂತೆ ಹಲವು ಸುಧಾರಿತ ವೈಶಿಷ್ಟ್ಯಗಳು ಈ ಆಪ್‌ನಲ್ಲಿ ಲಭ್ಯವಿದೆ.

‘ರೈಲ್‌ಒನ್’ ಆಪ್ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ ಶೇ.3ರಷ್ಟು ರಿಯಾಯಿತಿ ಲಭಿಸಲಿದೆ. ಈ ಆಪ್‌ನಲ್ಲಿ ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ರೀತಿಯ ಡಿಜಿಟಲ್ ಪಾವತಿ ಆಯ್ಕೆಗಳನ್ನು ಬಳಸಿ ಟಿಕೆಟ್‌ಗಳನ್ನು ಕಾಯ್ದಿರಿಸಬಹುದಾಗಿದೆ.

ರೈಲ್‌ಒನ್ ಆಪ್ ಗೂಗಲ್ ಪ್ಲೇ ಸ್ಟೋರ್ ಮತ್ತು ಐಒಎಸ್ ಆಪ್ ಸ್ಟೋರ್ ನಲ್ಲಿ ಉಚಿತವಾಗಿ ಲಭ್ಯವಿದೆ. ಭಾರತೀಯ ರೈಲ್ವೆಯು ತನ್ನ ಹಳೆಯ ‘ಯುಟಿಎಸ್ ಆನ್ ಮೊಬೈಲ್’ ಆಪ್ ಸೇವೆಗಳನ್ನು 2026ರ ಮಾರ್ಚ್ 1, ಹಂತ ಹಂತವಾಗಿ ಸ್ಥಗಿತಗೊಳಿಸಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago