ದೇಶ- ವಿದೇಶ

ಕವಚ್‌ ಅಳವಡಿಸಿಲ್ಲ: ಕಾಂಚನಜುಂಗಾ ರೈಲು ಅಪಘಾತ ಬಳಿಕ ರೈಲ್ವೆ ಮಂಡಿಳಿ ಅಧ್ಯಕ್ಷೆ ಸ್ಪಷ್ಟನೆ!

ಪಶ್ಚಿಮ ಬಂಗಾಳ: ಇಂದು (ಸೋಮವಾರ, ಜೂನ್‌.17) ಬೆಳಿಗ್ಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತವಾದ ಮಾರ್ಗದಲ್ಲಿ ರೈಲುಗಳ ನಡುವೆ ಡಿಕ್ಕಿಯಾಗುವುದನ್ನು ತಡೆಯುವ ಕವಚ್‌ ವ್ಯವಸ್ಥೆಯನ್ನು ಅಳವಡಿಸಿಲ್ಲ ಎಂದು ರೈಲ್ವೆ ಮಂಡಳಿ ಅಧ್ಯಕ್ಷೆ ಜಯಾ ವರ್ಮಾ ಸಿನ್ಹಾ ಹೇಳಿದ್ದಾರೆ.

ಕಂಚನಾಜುಂಗಾ ಎಕ್ಸ್‌ಪ್ರೆಸ್‌ ಹಾಗೂ ಗೂಡ್ಸ್‌ ರೈಲು ಡಿಕ್ಕಿ ಹೊಡೆದಿರುವುದು ಇದೇ ಮಾರ್ಗದಲ್ಲಿ ಎನ್ನುವುದು ವಿಶೇಷ.

ಸರಕು ಸಾಗಣೆಯ ಗೂಡ್ಸ್‌ ರೈಲು ಚಾಲಕ ಸಿಗ್ನಲ್‌ ಗಮನಿಸಿದ ಕಾರಣಕ್ಕೆ ಈ ಅಪಘಾತ ಉಂಟಾಗಿರಬಹುದು. ಹಿಂಬದಿಗೆ ಬಂದು ಗುದ್ದಿರುವ ಕಾರಣ ಗಾರ್ಡ್‌ ಕೋಚ್‌ಗೆ ಹಾನಿಯಾಗಿದೆ ಹೊರತು ಪ್ರಯಾಣಿಕರಿಗ ಆಗಿಲ್ಲ. ಮುಂದಿನ ದಿನಗಳಲ್ಲಿ ಈ ಮಾರ್ಗದಲ್ಲಿಯೂ ಕವಚ್‌ ಅಳವಡಿಸುವ ಯೋಜನೆಯಿದೆ ಎಂದು ಸಿನ್ಹಾ ಹೇಳಿದರು.

ಕವಚ್‌ ಅಳವಡಿಸುವ ಕಾರ್ಯ ತ್ವರಿತವಾಗಿ ನಡೆಯುತ್ತಿದ್ದು, ಈವರೆಗೆ ಈ ವ್ಯವಸ್ಥೆಯ 1500 ಕಿಮೀ ರೈಲು ಮಾರ್ಗಗಳಿಗೆ ಈಗಾಗಲೇ ಕವಚ್‌ ಅಳವಡಿಸಲಾಗಿದ್ದು, ಈ ವರ್ಷದ ಅಂತ್ಯದೊಳಗೆ 3000 ಕಿಮೀ ಉದ್ದದ ಮಾರ್ಗಕ್ಕೆ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ ರಂಗಪಾನಿ ನಿಲ್ದಾಣದಿಂದ ಹೊರಟಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು (ಟ್ರೈನ್‌ ಸಂಖ್ಯೆ 13174) ಸಿಗ್ನಲ್‌ ದೋಷದಿಂದಾಗಿ ರಾಣಿಪಾತ್ರಾ ಹಾಗೂ ಛತ್ತರ್‌ ಹಾಟ್‌ ನಿಲ್ದಾಣದ ನಡುವೆಯೇ ಬೆಳಿಗ್ಗೆ 5.30 ರಿಂದಲೇ ನಿಂತಿತ್ತು.

ಇದೇ ಮಾರ್ಗದಲ್ಲಿ ಗೂಡ್ಸ್‌ ಗಾಡಿಯೊಂದು ಹಿಂಬದಿಯಿಂದ ಬರುತ್ತಿದ್ದು, ಸಿಗ್ನಲ್‌ ದೋಷ ನೋಡಿಕೊಳ್ಳದೇ ಕಾಂಚನಜುಂಗಾ ರೈಲಿಗೆ ಅಪ್ಪಳಿಸಿದೆ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರ ಪೈಕಿ 15 ಮಂದಿ ಮೃತರಾಗಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತ ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

41 mins ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

49 mins ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

52 mins ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

1 hour ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

1 hour ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

2 hours ago