ದೇಶ- ವಿದೇಶ

ಕವಚ್‌ ಅಳವಡಿಸಿಲ್ಲ: ಕಾಂಚನಜುಂಗಾ ರೈಲು ಅಪಘಾತ ಬಳಿಕ ರೈಲ್ವೆ ಮಂಡಿಳಿ ಅಧ್ಯಕ್ಷೆ ಸ್ಪಷ್ಟನೆ!

ಪಶ್ಚಿಮ ಬಂಗಾಳ: ಇಂದು (ಸೋಮವಾರ, ಜೂನ್‌.17) ಬೆಳಿಗ್ಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತವಾದ ಮಾರ್ಗದಲ್ಲಿ ರೈಲುಗಳ ನಡುವೆ ಡಿಕ್ಕಿಯಾಗುವುದನ್ನು ತಡೆಯುವ ಕವಚ್‌ ವ್ಯವಸ್ಥೆಯನ್ನು ಅಳವಡಿಸಿಲ್ಲ ಎಂದು ರೈಲ್ವೆ ಮಂಡಳಿ ಅಧ್ಯಕ್ಷೆ ಜಯಾ ವರ್ಮಾ ಸಿನ್ಹಾ ಹೇಳಿದ್ದಾರೆ.

ಕಂಚನಾಜುಂಗಾ ಎಕ್ಸ್‌ಪ್ರೆಸ್‌ ಹಾಗೂ ಗೂಡ್ಸ್‌ ರೈಲು ಡಿಕ್ಕಿ ಹೊಡೆದಿರುವುದು ಇದೇ ಮಾರ್ಗದಲ್ಲಿ ಎನ್ನುವುದು ವಿಶೇಷ.

ಸರಕು ಸಾಗಣೆಯ ಗೂಡ್ಸ್‌ ರೈಲು ಚಾಲಕ ಸಿಗ್ನಲ್‌ ಗಮನಿಸಿದ ಕಾರಣಕ್ಕೆ ಈ ಅಪಘಾತ ಉಂಟಾಗಿರಬಹುದು. ಹಿಂಬದಿಗೆ ಬಂದು ಗುದ್ದಿರುವ ಕಾರಣ ಗಾರ್ಡ್‌ ಕೋಚ್‌ಗೆ ಹಾನಿಯಾಗಿದೆ ಹೊರತು ಪ್ರಯಾಣಿಕರಿಗ ಆಗಿಲ್ಲ. ಮುಂದಿನ ದಿನಗಳಲ್ಲಿ ಈ ಮಾರ್ಗದಲ್ಲಿಯೂ ಕವಚ್‌ ಅಳವಡಿಸುವ ಯೋಜನೆಯಿದೆ ಎಂದು ಸಿನ್ಹಾ ಹೇಳಿದರು.

ಕವಚ್‌ ಅಳವಡಿಸುವ ಕಾರ್ಯ ತ್ವರಿತವಾಗಿ ನಡೆಯುತ್ತಿದ್ದು, ಈವರೆಗೆ ಈ ವ್ಯವಸ್ಥೆಯ 1500 ಕಿಮೀ ರೈಲು ಮಾರ್ಗಗಳಿಗೆ ಈಗಾಗಲೇ ಕವಚ್‌ ಅಳವಡಿಸಲಾಗಿದ್ದು, ಈ ವರ್ಷದ ಅಂತ್ಯದೊಳಗೆ 3000 ಕಿಮೀ ಉದ್ದದ ಮಾರ್ಗಕ್ಕೆ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ ರಂಗಪಾನಿ ನಿಲ್ದಾಣದಿಂದ ಹೊರಟಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು (ಟ್ರೈನ್‌ ಸಂಖ್ಯೆ 13174) ಸಿಗ್ನಲ್‌ ದೋಷದಿಂದಾಗಿ ರಾಣಿಪಾತ್ರಾ ಹಾಗೂ ಛತ್ತರ್‌ ಹಾಟ್‌ ನಿಲ್ದಾಣದ ನಡುವೆಯೇ ಬೆಳಿಗ್ಗೆ 5.30 ರಿಂದಲೇ ನಿಂತಿತ್ತು.

ಇದೇ ಮಾರ್ಗದಲ್ಲಿ ಗೂಡ್ಸ್‌ ಗಾಡಿಯೊಂದು ಹಿಂಬದಿಯಿಂದ ಬರುತ್ತಿದ್ದು, ಸಿಗ್ನಲ್‌ ದೋಷ ನೋಡಿಕೊಳ್ಳದೇ ಕಾಂಚನಜುಂಗಾ ರೈಲಿಗೆ ಅಪ್ಪಳಿಸಿದೆ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರ ಪೈಕಿ 15 ಮಂದಿ ಮೃತರಾಗಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತ ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

4 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

4 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

7 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

7 hours ago