ನವದೆಹಲಿ: ಮುಂಗಾರು ಮಳೆ ದೇಶದ ಹಲವೆಡೆ ಅಬ್ಬರಿಸುತ್ತಿದೆ. ಈ ಸಂತಸದ ನಡುವೆಯೇ ಭಾರತ ಹವಾಮಾನ ಇಲಾಖೆ ಮಹತ್ವದ ಸಂಗತಿಯನ್ನು ತಿಳಿಸಿದೆ.
ಮಾನ್ಸೂನ್ ಆರಂಭವಾದಾಗಿನಿಂದ ದೇಶದಲ್ಲಿ ಸಾಮಾನ್ಯಕ್ಕಿಂತ ಶೇ.7ರಷ್ಟು ಹೆಚ್ಚಿನ ಮಳೆಯಾಗಿದೆ. ರಾಜಸ್ಥಾನ, ಲಡಾಖ್, ನಾಗಾಲ್ಯಾಂಡ್, ಮಣಿಪುರ ಮತ್ತು ಸಿಕ್ಕಿಂನಲ್ಲಿ ಅತೀ ಹೆಚ್ಚು ಮಳೆಯಾಗಿದೆ.
ಕೆಲವು ರಾಜ್ಯಗಳು ಹೆಚ್ಚಿನ ಮಳೆ ಪಡೆದಿದ್ದರೆ, ಇನ್ನು ಕೆಲವು ರಾಜ್ಯಗಳು ಸಾಮಾನ್ಯಕ್ಕಿಂತ ಕಡಿಮೆ ಕಂಡಿವೆ. ಈವರೆಗೂ ದೇಶದಲ್ಲಿ 447.8 ಮಿಮೀ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ.
ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಆದರೂ, ಕೆಲವೆಡೆ ಮಳೆ ಕೊರತೆ ಉಂಟಾಗಿದೆ. ದೇಶದಲ್ಲಿ ಸಾಮಾನ್ಯವಾಗಿ ಇಷ್ಟೊತ್ತಿಗಾಗಲೇ 418.9 ಮಿ ಮೀ. ಮಳೆ ಸುರಿಯುತ್ತದೆ. ಆದರೆ, ಈ ಬಾರಿ ಅದು ಹೆಚ್ಚಾಗಿದೆ ಎಂದು ತಿಳಿಸಿದೆ.
ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಹರಿಯಾಣ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಒಡಿಶಾ, ಗೋವಾ, ತ್ರಿಪುರ, ಮಿಜೋರಾಂ, ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್ಗಢ, ಪುದುಚೇರಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಐಎಂಡಿ ದತ್ತಾಂಶದ ಪ್ರಕಾರ, ಈ ಪ್ರದೇಶಗಳಲ್ಲಿ ಸರಾಸರಿ ಮಳೆಯೇ ಶೇಕಡಾ.19ಕ್ಕಿಂತ ಕಡಿಮೆ ಇದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…