ದೇಶ- ವಿದೇಶ

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾದ ವಕ್ತಿಯ ಹೊಟ್ಟೆಯಲ್ಲಿತ್ತು 63 ನಾಣ್ಯಗಳು

ಜೋಧ್​​ಪುರ: ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊಟ್ಟೆನೋವೆಂದು ಬಂದ ರೋಗಿಯನ್ನು ಪರೀಕ್ಷಿಸಿದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಪತ್ತೆಯಾಗಿದೆ. ರಾಜಸ್ಥಾನದ ವೈದ್ಯರು ಎಂಡೋಸ್ಕೋಪಿಕ್ ಪ್ರಕ್ರಿಯೆಯ ಮೂಲಕ ಆ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯಗಳನ್ನು ಹೊರತೆಗೆದಿದ್ದಾರೆ.

ಜೋಧ್‌ಪುರದ ಎಂಡಿಎಂ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ನಡೆದ ಕಾರ್ಯಾಚರಣೆಯ ಬಳಿಕ ನಾಣ್ಯಗಳನ್ನು ಹೊರಗೆ ತೆಗೆಯಲಾಗಿದೆ. ಆ ವ್ಯಕ್ತಿ ಖಿನ್ನತೆಯಿಂದ ಈ ನಾಣ್ಯಗಳನ್ನು ನುಂಗಿದ್ದ ಎಂದು ಹೇಳಲಾಗಿದೆ. “ಆಸ್ಪತ್ರೆಗೆ ಬಂದ ಅವರು 10-15 ನಾಣ್ಯಗಳನ್ನು ನುಂಗಿದ್ದಾರೆ ಎಂದು ನಮ್ಮ ಬಳಿ ಹೇಳಿದರು. ನಾವು ಹೊಟ್ಟೆಯ ಎಕ್ಸ್-ರೇ ನಡೆಸಿದಾಗ ನಾಣ್ಯಗಳ ರಾಶಿಯೇ ಅಲ್ಲಿರುವುದು ಕಂಡುಬಂದಿತು” ಎಂದು ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮುಖ್ಯಸ್ಥ ನರೇಂದ್ರ ಭಾರ್ಗವ್ ವಿವರಿಸಿದ್ದಾರೆ.

andolana

Recent Posts

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

1 hour ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

1 hour ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

1 hour ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

2 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

3 hours ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

4 hours ago