ದೇಶ- ವಿದೇಶ

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಖ್ಯಾತ ನಟರಾದ ರಜನಿಕಾಂತ್, ಕಮಲ್ ಹಾಸನ್, ಮುಖ್ಯಮಂತ್ರಿ ವಿಜಯ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು. ಭಾರತಿರಾಜ್ ಅವರ ಅಂತಿಮ ದರ್ಶನ ಪಡೆದರು.

ಅಂತಿಮ ದರ್ಶನದ ಬಳಿಕ ಮಾತನಾಡಿದ ಸಿಎಂ ವಿಜಯ್, ಅಗಲಿದ ಹೆಸರಾಂತ ನಿರ್ದೇಶಕ, ನಟ ಭಾರತಿರಾಜ್ ಅವರ ಅಂತ್ಯ ಸಂಸ್ಕಾರವನ್ನು ಸಕಲ ಗೌರವ ಗೌರವಗಳೊಂದಿಗೆ ಮಾಡುವುದಾಗಿ ತಿಳಿಸಿದರು. ರಾಷ್ಟ್ರ ಪ್ರಶಸ್ತಿ, ಪದ್ಮಶ್ರೀ ಸೇರಿದಂತೆ ಹತ್ತು ಹಲವಾರು ಗೌರವಗಳನ್ನು ಪಡೆದಿರುವ ಭಾರತಿರಾಜ್ ಅವರನ್ನು ಇದೇ ಸಂದರ್ಭದಲ್ಲಿ ವಿಜಯ್ ಸ್ಮರಿಸಿದರು.

ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಭಾರತಿರಾಜ್, ತಮ್ಮ ವಿಶಿಷ್ಟ ಕಥಾಹಂದರ ಹಾಗೂ ಗ್ರಾಮೀಣ ಸೊಗಡಿನ ಚಿತ್ರಗಳ ಮೂಲಕ ದಕ್ಷಿಣ ಭಾರತದ ಸಿನಿಮಾ ರಂಗಕ್ಕೆ ವಿಭಿನ್ನ ರೂಪವನ್ನು ನೀಡಿದ್ದರು. ತಮ್ಮ ಸುದೀರ್ಘ ಮತ್ತು ಅದ್ಭುತ ಸಿನಿ ಪಯಣದಲ್ಲಿ ಭಾರತಿರಾಜ ಅವರು ಕೇವಲ ನಿರ್ದೇಶನ ಮಾತ್ರವಲ್ಲದೆ, ಕಥೆಗಾರರಾಗಿ ಮತ್ತು ನಟರಾಗಿಯೂ ಗುರುತಿಸಿಕೊಂಡಿದ್ದರು.

ತಮಿಳುನಾಡಿನ ತೇಣಿ ಜಿಲ್ಲೆಯ ಒಂದು ಸಾಮಾನ್ಯ ಗ್ರಾಮೀಣ ಕುಟುಂಬದಲ್ಲಿ ಜನಿಸಿದ ಅವರು ಚಿತ್ರರಂಗಕ್ಕೆ ಬರುವ ಮುನ್ನ ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಸಿನಿಮಾ ಮೇಲಿನ ಅತಿಯಾದ ಆಸಕ್ತಿಯಿಂದಾಗಿ ನಂತರ ಚೆನ್ನೈಗೆ ವಲಸೆ ಬಂದು, ಕನ್ನಡದ ಖ್ಯಾತ ನಿರ್ದೇಶಕರಾದ ಪುಟ್ಟಣ್ಣ ಕಣಗಾಲ್ ಅವರ ಬಳಿ ಸಹ-ನಿರ್ದೇಶಕರಾಗಿ ಕೆಲಸ ಕರಗತ ಮಾಡಿಕೊಂಡಿದ್ದರು.

1977ರಲ್ಲಿ 16 ವಯತಿನಿಲೆ ಸಿನಿಮಾ ಮೂಲಕ ನಿರ್ದೇಶಕರಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಲ್ಲುಕ್ಕುಲ್ ಈರಮ್, ಕಿಝಕ್ಕೆ ಪೋಗುಮ್ ರೈಲ್, ಸಿಗಪ್ಪು ರೋಜಕ್ಕಲ್, ನಿಝಲ್ಗಲ್ ಇವರ ಸಿನಿಮಾಗಳು. ಭಾರತಿರಾಜ ಅವರ ಸಾಧನೆಗಾಗಿ ‘ಅತ್ಯುತ್ತಮ ಚಿತ್ರ’ ಹಾಗೂ ‘ಅತ್ಯುತ್ತಮ ಚಿತ್ರಕಥೆ’ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ತಮ್ಮ ಚಿತ್ರಗಳ ಮೂಲಕ ಚಿತ್ರರಂಗದ ದಿಕ್ಕನ್ನೇ ಬದಲಿಸಿದ್ದ ಈ ಮಹಾನ್ ಚೇತನದ ಅಗಲಿಕೆಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago