ದೇಶ- ವಿದೇಶ

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌

ಚನ್ನೈನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಜಿನಿಕಾಂತ್‌ ಅವರು, ವಿಜಯ್ ಮುಖ್ಯಮಂತ್ರಿಯಾಗುವುದರ ಬಗ್ಗೆ ತಮಗೆ ಅಸೂಯೆ ಇಲ್ಲ, ಏಕೆಂದರೆ ನಾನು ರಾಜಕೀಯದಲ್ಲಿಲ್ಲ ಎಂದು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ವಿಜಯ್ ಅವರು ತಮಿಳುನಾಡಿನ ರಾಜಕೀಯ ಇತಿಹಾಸದಲ್ಲೇ ಅದ್ವಿತೀಯ ಸಾಧನೆ ಮಾಡಿದ್ದಾರೆ. ಅವರು ಏಕಾಂಗಿಯಾಗಿ ಗೆಲುವು ಸಾಧಿಸಿದ್ದಾರೆ. ಇದು ನನಗೆ ಅಚ್ಚರಿ ಮತ್ತು ಖುಷಿ ಎರಡೂ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಎಂಜಿಆರ್ ಮತ್ತು ಎನ್ ಟಿಆರ್ ಅವರ ಸಾಧನೆಯನ್ನೂ ವಿಜಯ್ ಮೀರಿಸಿದ್ದಾರೆ. ಎಂಜಿಆರ್ ಮತ್ತು ಎನ್‍ಟಿಆರ್ ಅವರು ತಮ್ಮ ಕಾಲದಲ್ಲಿ ದೊಡ್ಡ ನಾಯಕರಾಗಿದ್ದರು. ಆದರೆ ವಿಜಯ್ ಅವರು ಅವರನ್ನೂ ಮೀರಿಸಿದಂತಹ ಸಾಧನೆ ಮಾಡಿದ್ದಾರೆ. ಇದು ತಮಿಳುನಾಡಿನ ರಾಜಕೀಯಕ್ಕೆ ಹೊಸ ಇತಿಹಾಸ ಎಂದು ಹಾಡಿ ಹೊಗಳಿದರು.

ವಿಜಯ್ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದಿಗ್ವಿಜಯ ಸಾಧಿಸಿದ್ದಾರೆ. ತಮಿಳುನಾಡಿನ ಎರಡು ದಿಗ್ಗಜ ದ್ರಾವಿಡ ಪಕ್ಷಗಳ ವಿರುದ್ಧ ಸ್ಪರ್ಧಿಸಿ, ಅವರನ್ನೂ ಸೋಲಿಸಿದ್ದಾರೆ. ಅಷ್ಟೇ ಅಲ್ಲ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧವೂ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇಷ್ಟೆಲ್ಲಾ ವಿರೋಧಗಳ ನಡುವೆಯೂ ಅವರು ಸ್ವತಂತ್ರವಾಗಿ, ಏಕಾಂಗಿಯಾಗಿ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅವರ ಈ ಗೆಲುವನ್ನು ರಜನಿಕಾಂತ್ ದಿಗ್ವಿಜಯ ಎಂದೇ ಕರೆದಿದ್ದಾರೆ. ಯಾರ ಸಹಾಯವೂ ಇಲ್ಲದೆ, ಯಾವ ಒಕ್ಕೂಟವೂ ಇಲ್ಲದೆ, ಕೇವಲ ತಮ್ಮ ಪಕ್ಷದ ಶಕ್ತಿಯಿಂದಲೇ ಅವರು ಇಷ್ಟು ದೊಡ್ಡ ಗೆಲುವು ಸಾಧಿಸಿದ್ದಾರೆ. ಇದು ನಿಜಕ್ಕೂ ಅಭೂತಪೂರ್ವ ಸಾಧನೆ ಎಂದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

26 mins ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

35 mins ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

1 hour ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

4 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

4 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

15 hours ago