ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ.
ಚನ್ನೈನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಜಿನಿಕಾಂತ್ ಅವರು, ವಿಜಯ್ ಮುಖ್ಯಮಂತ್ರಿಯಾಗುವುದರ ಬಗ್ಗೆ ತಮಗೆ ಅಸೂಯೆ ಇಲ್ಲ, ಏಕೆಂದರೆ ನಾನು ರಾಜಕೀಯದಲ್ಲಿಲ್ಲ ಎಂದು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
ವಿಜಯ್ ಅವರು ತಮಿಳುನಾಡಿನ ರಾಜಕೀಯ ಇತಿಹಾಸದಲ್ಲೇ ಅದ್ವಿತೀಯ ಸಾಧನೆ ಮಾಡಿದ್ದಾರೆ. ಅವರು ಏಕಾಂಗಿಯಾಗಿ ಗೆಲುವು ಸಾಧಿಸಿದ್ದಾರೆ. ಇದು ನನಗೆ ಅಚ್ಚರಿ ಮತ್ತು ಖುಷಿ ಎರಡೂ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಎಂಜಿಆರ್ ಮತ್ತು ಎನ್ ಟಿಆರ್ ಅವರ ಸಾಧನೆಯನ್ನೂ ವಿಜಯ್ ಮೀರಿಸಿದ್ದಾರೆ. ಎಂಜಿಆರ್ ಮತ್ತು ಎನ್ಟಿಆರ್ ಅವರು ತಮ್ಮ ಕಾಲದಲ್ಲಿ ದೊಡ್ಡ ನಾಯಕರಾಗಿದ್ದರು. ಆದರೆ ವಿಜಯ್ ಅವರು ಅವರನ್ನೂ ಮೀರಿಸಿದಂತಹ ಸಾಧನೆ ಮಾಡಿದ್ದಾರೆ. ಇದು ತಮಿಳುನಾಡಿನ ರಾಜಕೀಯಕ್ಕೆ ಹೊಸ ಇತಿಹಾಸ ಎಂದು ಹಾಡಿ ಹೊಗಳಿದರು.
ವಿಜಯ್ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದಿಗ್ವಿಜಯ ಸಾಧಿಸಿದ್ದಾರೆ. ತಮಿಳುನಾಡಿನ ಎರಡು ದಿಗ್ಗಜ ದ್ರಾವಿಡ ಪಕ್ಷಗಳ ವಿರುದ್ಧ ಸ್ಪರ್ಧಿಸಿ, ಅವರನ್ನೂ ಸೋಲಿಸಿದ್ದಾರೆ. ಅಷ್ಟೇ ಅಲ್ಲ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧವೂ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇಷ್ಟೆಲ್ಲಾ ವಿರೋಧಗಳ ನಡುವೆಯೂ ಅವರು ಸ್ವತಂತ್ರವಾಗಿ, ಏಕಾಂಗಿಯಾಗಿ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರ ಈ ಗೆಲುವನ್ನು ರಜನಿಕಾಂತ್ ದಿಗ್ವಿಜಯ ಎಂದೇ ಕರೆದಿದ್ದಾರೆ. ಯಾರ ಸಹಾಯವೂ ಇಲ್ಲದೆ, ಯಾವ ಒಕ್ಕೂಟವೂ ಇಲ್ಲದೆ, ಕೇವಲ ತಮ್ಮ ಪಕ್ಷದ ಶಕ್ತಿಯಿಂದಲೇ ಅವರು ಇಷ್ಟು ದೊಡ್ಡ ಗೆಲುವು ಸಾಧಿಸಿದ್ದಾರೆ. ಇದು ನಿಜಕ್ಕೂ ಅಭೂತಪೂರ್ವ ಸಾಧನೆ ಎಂದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…