rajnath singh
ಭುಜ್ (ಗುಜರಾತ್) : ಆಪರೇಷನ್ ಸಿಂದೂರ ಸಮಯದಲ್ಲಿ ಭಾರತೀಯ ವಾಯುಪಡೆ ತೋರಿದ ಶೌರ್ಯವನ್ನು ಶ್ಲಾಘಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂದೂರ ಇನ್ನೂ ಮುಗಿದಿಲ್ಲ. ಈಗ ಏನಾಯಿತು ಎಂಬುದು ಕೇವಲ ಟ್ರೇಲರ್ ಎಂದು ಪ್ರತಿಪಾದಿಸಿದರು.
ಭುಜ್ ವಾಯುಪಡೆ ನಿಲ್ದಾಣದಲ್ಲಿ ವಾಯುಪಡೆಯ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಪಾಕಿಸ್ತಾನಕ್ಕೆ ಏನೆಂದು ತೋರಿಸಿದ್ದೇವೆ. ಇದು ಟ್ರೇಲರ್ ಅಷ್ಟೆ. ಸರಿಯಾದ ಸಮಯ ಬಂದಾಗ, ಪೂರ್ಣ ಚಿತ್ರಣವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಹೇಳಿದರು.
23 ನಿಮಿಷ ಸಾಕಾಗಿತ್ತು
ಆಪರೇಷನ್ ಸಿಂದೂರ ಸಮಯದಲ್ಲಿ ನಿಮ್ಮ ಶೌರ್ಯ ಭಾರತೀಯರು ಹೆಮ್ಮೆ ಪಡುವಂತಿದೆ. ಪಾಕಿಸ್ತಾನದಲ್ಲಿ ಪೋಷಿಸಲಾಗಿರುವ ಭಯೋತ್ಪಾದಕರು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರು ಅವರನ್ನು ಹತ್ತಿಕ್ಕಲು ಭಾರತೀಯ ವಾಯುಪಡೆಗೆ ಕೇವಲ 23 ನಿಮಿಷಗಳು ಸಾಕಾಗಿತ್ತು ಎಂದು ಹೇಳಿದರು.
ಭುಜ್ ವಾಯುನೆಲೆಗೆ ಭೇಟಿ
ಗುಜರಾತ್ನ ಭುಜ್ ವಾಯುನೆಲೆಗೆ ಇಂದು ಭೇಟಿ ನೀಡಿದ ಸಚಿವರು, ಸೇನೆಯೊಂದಿಗೆ ಸಂವಾದ ನಡೆಸಿದರು. ಕಳೆದ ವಾರ ನಡೆದ ಪಾಕಿಸ್ತಾನ ಜತೆಗಿನ ಸಂಘರ್ಷದ ವೇಳೆಯಲ್ಲಿ ಪಾಕ್ ಸೇನೆ ಈ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿತ್ತು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…