rajnath singh
ಭುಜ್ (ಗುಜರಾತ್) : ಆಪರೇಷನ್ ಸಿಂದೂರ ಸಮಯದಲ್ಲಿ ಭಾರತೀಯ ವಾಯುಪಡೆ ತೋರಿದ ಶೌರ್ಯವನ್ನು ಶ್ಲಾಘಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂದೂರ ಇನ್ನೂ ಮುಗಿದಿಲ್ಲ. ಈಗ ಏನಾಯಿತು ಎಂಬುದು ಕೇವಲ ಟ್ರೇಲರ್ ಎಂದು ಪ್ರತಿಪಾದಿಸಿದರು.
ಭುಜ್ ವಾಯುಪಡೆ ನಿಲ್ದಾಣದಲ್ಲಿ ವಾಯುಪಡೆಯ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಪಾಕಿಸ್ತಾನಕ್ಕೆ ಏನೆಂದು ತೋರಿಸಿದ್ದೇವೆ. ಇದು ಟ್ರೇಲರ್ ಅಷ್ಟೆ. ಸರಿಯಾದ ಸಮಯ ಬಂದಾಗ, ಪೂರ್ಣ ಚಿತ್ರಣವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಹೇಳಿದರು.
23 ನಿಮಿಷ ಸಾಕಾಗಿತ್ತು
ಆಪರೇಷನ್ ಸಿಂದೂರ ಸಮಯದಲ್ಲಿ ನಿಮ್ಮ ಶೌರ್ಯ ಭಾರತೀಯರು ಹೆಮ್ಮೆ ಪಡುವಂತಿದೆ. ಪಾಕಿಸ್ತಾನದಲ್ಲಿ ಪೋಷಿಸಲಾಗಿರುವ ಭಯೋತ್ಪಾದಕರು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರು ಅವರನ್ನು ಹತ್ತಿಕ್ಕಲು ಭಾರತೀಯ ವಾಯುಪಡೆಗೆ ಕೇವಲ 23 ನಿಮಿಷಗಳು ಸಾಕಾಗಿತ್ತು ಎಂದು ಹೇಳಿದರು.
ಭುಜ್ ವಾಯುನೆಲೆಗೆ ಭೇಟಿ
ಗುಜರಾತ್ನ ಭುಜ್ ವಾಯುನೆಲೆಗೆ ಇಂದು ಭೇಟಿ ನೀಡಿದ ಸಚಿವರು, ಸೇನೆಯೊಂದಿಗೆ ಸಂವಾದ ನಡೆಸಿದರು. ಕಳೆದ ವಾರ ನಡೆದ ಪಾಕಿಸ್ತಾನ ಜತೆಗಿನ ಸಂಘರ್ಷದ ವೇಳೆಯಲ್ಲಿ ಪಾಕ್ ಸೇನೆ ಈ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿತ್ತು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…