ದೇಶ- ವಿದೇಶ

ಪಾಕಿಸ್ತಾನಕ್ಕೆ ಐಎಂಎಫ್‌ ನೆರವು : ಪರಿಶೀಲಿಸುವಂತೆ ವಿಶ್ವಸಂಸ್ಥೆಗೆ ಮನವಿ ಮಾಡಿದ ರಾಜನಾಥ್‌ ಸಿಂಗ್‌

ಭುಜ್‌ (ಗುಜರಾತ್‌) : ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯು ಪಾಕಿಸ್ತಾನಕ್ಕೆ ಬಿಡುಗಡೆ ಮಾಡಿರುವ ಹಣಕಾಸು ನೆರವಿನ ಬಗ್ಗೆ ವಿಶ್ವಸಂಸ್ಥೆ ನಿಗಾ ವಹಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮನವಿ ಮಾಡಿದರು.

ಗುರುವಾರವಷ್ಟೇ ಶ್ರೀನಗರದ ವಾಯುನೆಲೆಗೆ ಭೇಟಿ ಕೊಟ್ಟ ಬೆನ್ನಲ್ಲೇ ಶುಕ್ರವಾರ ಗುಜರಾತ್‍ನ ಭುಚ್ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಸೇನಾಪಡೆಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ತಮ್ಮ ಭಾಷಣದಲ್ಲಿ ಭಾರತೀಯ ವಾಯುಪಡೆಯ ಸೈನಿಕರನ್ನು ಶ್ಲಾಘಿಸಿದ ಅವರು, ಸೇನಾ ಪಡೆಗೆ ಅಭಿನಂದನೆ ಸಲ್ಲಿಸಿದರು.

ಮುಂದುವರೆದು ಪಾಕಿಸ್ತಾನಕ್ಕೆ ಐಎಂಎಫ್ ವಿಸ್ತೃತ ನಿಧಿ ಸೌಲಭ್ಯ ಕಾರ್ಯಕ್ರಮದಡಿ 1,023 ಶತಕೋಟಿ ಅಮೆರಿಕನ್ ಡಾಲರ್ ಹಣವನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳ ಪುನಶ್ಚೇತನಕ್ಕೆ ಬಳಸಿಕೊಳ್ಳುತ್ತದೆ.

ಪಾಕ್ ಭಯೋತ್ಪಾದಕರ ಮೂಲ ಚಟುವಟಿಕೆಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯನ್ನು ಬಳಕೆ ಮಾಡುತ್ತಿರುವುದಕ್ಕೆ ಸಾಕ್ಷಿಗಳು ಸಿಕ್ಕಿವೆ. ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರದಿಂದ ಧ್ವಂಸಗೊಂಡಿರುವ ಉಗ್ರರ ಕಟ್ಟಡಗಳ ಪುನಶ್ಚೇತನಕ್ಕೆ ಹಣ ಬಳಕೆ ಮಾಡುತ್ತಿದೆ. ಆದ್ದರಿಂದ ವಿಶ್ವ ಸಮುದಾಯ ಈ ರಾಷ್ಟ್ರಕ್ಕೆ ಹಣ ಬಿಡುಗಡೆ ಮಾಡಿರುವ ಅದನ್ನು ಯಾವ ಉದ್ದೇಶಕ್ಕೆ ಬಳಸಿದ್ದೇವೆ ಎಂಬ ಬಗ್ಗೆ ಸ್ಪಷ್ಟನೆ ಕೇಳುವಂತೆ ಒತ್ತಾಯಿಸಿದರು.

ನೀವು ಹಣ ನೀಡುವುದರ ಬಗ್ಗೆ ನಮ ಆಕ್ಷೇಪವಿಲ್ಲ. ಅದು ಸದುದ್ದೇಶಕ್ಕೆ ಬಳಕೆಯಾಗಿದೆ ಎಂಬುದನ್ನು ಅವಲೋಕನ ಮಾಡಬೇಕು ಎಂದು ಮನವಿ ಮಾಡಿದರು‌.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago