Rajnath Singh
ಭುಜ್ (ಗುಜರಾತ್) : ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯು ಪಾಕಿಸ್ತಾನಕ್ಕೆ ಬಿಡುಗಡೆ ಮಾಡಿರುವ ಹಣಕಾಸು ನೆರವಿನ ಬಗ್ಗೆ ವಿಶ್ವಸಂಸ್ಥೆ ನಿಗಾ ವಹಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮನವಿ ಮಾಡಿದರು.
ಗುರುವಾರವಷ್ಟೇ ಶ್ರೀನಗರದ ವಾಯುನೆಲೆಗೆ ಭೇಟಿ ಕೊಟ್ಟ ಬೆನ್ನಲ್ಲೇ ಶುಕ್ರವಾರ ಗುಜರಾತ್ನ ಭುಚ್ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಸೇನಾಪಡೆಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ತಮ್ಮ ಭಾಷಣದಲ್ಲಿ ಭಾರತೀಯ ವಾಯುಪಡೆಯ ಸೈನಿಕರನ್ನು ಶ್ಲಾಘಿಸಿದ ಅವರು, ಸೇನಾ ಪಡೆಗೆ ಅಭಿನಂದನೆ ಸಲ್ಲಿಸಿದರು.
ಮುಂದುವರೆದು ಪಾಕಿಸ್ತಾನಕ್ಕೆ ಐಎಂಎಫ್ ವಿಸ್ತೃತ ನಿಧಿ ಸೌಲಭ್ಯ ಕಾರ್ಯಕ್ರಮದಡಿ 1,023 ಶತಕೋಟಿ ಅಮೆರಿಕನ್ ಡಾಲರ್ ಹಣವನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳ ಪುನಶ್ಚೇತನಕ್ಕೆ ಬಳಸಿಕೊಳ್ಳುತ್ತದೆ.
ಪಾಕ್ ಭಯೋತ್ಪಾದಕರ ಮೂಲ ಚಟುವಟಿಕೆಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯನ್ನು ಬಳಕೆ ಮಾಡುತ್ತಿರುವುದಕ್ಕೆ ಸಾಕ್ಷಿಗಳು ಸಿಕ್ಕಿವೆ. ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರದಿಂದ ಧ್ವಂಸಗೊಂಡಿರುವ ಉಗ್ರರ ಕಟ್ಟಡಗಳ ಪುನಶ್ಚೇತನಕ್ಕೆ ಹಣ ಬಳಕೆ ಮಾಡುತ್ತಿದೆ. ಆದ್ದರಿಂದ ವಿಶ್ವ ಸಮುದಾಯ ಈ ರಾಷ್ಟ್ರಕ್ಕೆ ಹಣ ಬಿಡುಗಡೆ ಮಾಡಿರುವ ಅದನ್ನು ಯಾವ ಉದ್ದೇಶಕ್ಕೆ ಬಳಸಿದ್ದೇವೆ ಎಂಬ ಬಗ್ಗೆ ಸ್ಪಷ್ಟನೆ ಕೇಳುವಂತೆ ಒತ್ತಾಯಿಸಿದರು.
ನೀವು ಹಣ ನೀಡುವುದರ ಬಗ್ಗೆ ನಮ ಆಕ್ಷೇಪವಿಲ್ಲ. ಅದು ಸದುದ್ದೇಶಕ್ಕೆ ಬಳಕೆಯಾಗಿದೆ ಎಂಬುದನ್ನು ಅವಲೋಕನ ಮಾಡಬೇಕು ಎಂದು ಮನವಿ ಮಾಡಿದರು.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…