ಅಯೋಧ್ಯಾ : ಇಲ್ಲಿನ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಸೂರ್ಯನ ಕಿರಣಗಳು ಬಾಲರಾಮನ ಮೂರ್ತಿಯ ಹಣೆಯನ್ನು ಸ್ಪರ್ಶಿಸುತ್ತಿದ್ದಂತೆ, ಮಂದಿರದಲ್ಲಿ ಜೈಕಾರ ಮೊಳಗಿದವು.
ಅಯೋಧ್ಯ ರಾಮ ಮಂದಿರದಲ್ಲಿ ಪ್ರತಿ ರಾಮನವಮಿ ದಿನದಂದು ರಾಮನ ಮೂರ್ತಿಗೆ ಸೂರ್ಯ ತಿಲಕ ಇಡುವ ತಂತ್ರಜ್ಞಾನವ್ನು ಸಿಎಸ್ಐಆರ್ ಹಾಗೂ ಕೇಂದ್ರಿಯ ಕಟ್ಟಡ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿ ಅಳವಡಿಸಿದೆ.
ರಾಮ ಮಂದಿರದ ಮೂರನೇ ಮಹಡಿಯಲ್ಲಿ ಆಪ್ಟಿಕಲ್ ಲೆನ್ಸ್ವೊಂದು ಇದೆ. ಅದು ಪೈಪ್ಗಳಲ್ಲಿ ಅಳವಡಿಸಿರುವ ರಿಫ್ಲೆಕ್ಟರ್ಗಳ ಮೂಲಕ ಬೆಳಕನ್ನು ವಿಗ್ರಹದ ಹಣೆಯ ಮೆಲೆ ಮೂಡಿಸಲಿದೆ. ರಾಮನವಮಿ ದಿನದಂದು ಮಧ್ಯಾಹ್ನ 12ರಿಂದ ಸುಮಾರು 6 ನಿಮಿಷಗಳ ಕಾಲ ಸೂರ್ಯನ ಬೆಳಕು ಗರ್ಭಗುಡಿಯ ವಿಗ್ರಹದ ಹಣೆಯ ಮೇಲೆ ಬೀಳಲಿದೆ ಎಂದು ವಿಜ್ಞಾನಿ ಆರ್.ಧರ್ಮರಾಜು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…