ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.
ಸೂರ್ಯ ರಶ್ಮಿಯು ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂದಿದೆ. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ಬಾಲ ರಾಮನ ಮೂರ್ತಿಯ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕ ರೂಪಿಸಿತು. ಈ ತಿಲಕವು ಮೂರ್ತಿಯ ಮೇಲೆ ಸುಮಾರು 3 ರಿಂದ 4 ನಿಮಿಷಗಳ ಕಾಲ ಕಂಡುಬಂದಿತು. ಈ ವಿಸ್ಮಯವನ್ನು ಶ್ರೀರಾಮನ ಭಕ್ತರು ಕಣ್ತುಂಬಿಕೊಂಡರು. ಈ ಸೂರ್ಯ ರಶ್ಮಿಯು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.
2 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ
ಇನ್ನೂ ರಾಮನವಮಿ ಸಂಭ್ರಮದ ಹಿನ್ನೆಲೆ ದೇಶಾದ ವಿವಿಧೆಡೆಯಿಂದ ಶ್ರೀರಾಮನ ಭಕ್ತರು ಅಯೋಧ್ಯೆಗೆ ಬರಲಾರಂಭಿಸಿದ್ದಾರೆ. ತಡರಾತ್ರಿ 2 ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಸಹ ರಾತ್ರಿ 10 ಗಂಟೆವರೆಗೆ ಬಾಲ ರಾಮನ ದರ್ಶನಕ್ಕೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…