ದೇಶ- ವಿದೇಶ

ರಶ್ಮಿಕಾ ಮಂದಣ್ಣ ಈಗ ಸೈಬರ್ ಭದ್ರತಾ ರಾಯಭಾರಿ!

ಹೊಸದಿಲ್ಲಿ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ ಭಾರತದ ಸೈಬರ್ ಅಪರಾಧಗಳ ಸಮನ್ವಯ ಕೇಂದ್ರದ(ಐ4ಸಿ) ರಾಷ್ಟ್ರೀಯ ಬ್ರಾಂಡ್‌ ಅಂಬಾಸಿಡರ್‌ ಆಗಿ ನೇಮಕಗೊಂಡಿದ್ದಾರೆ.

ಈ ಹಿಂದೆ ರಶ್ಮಿಕ ಅವರ ಡೀಪ್ ಫೇಕ್ ವಿಡಿಯೊವೊಂದು ಈ ವರ್ಷದ ಆರಂಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಕೇಂದ್ರ ಗೃಹ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐ4ಸಿ (ಇಂಡಿಯನ್ ಸೈಬರ್​ಕ್ರೈಂ ಕೋಆರ್ಡಿನೇಷನ್ ಸೆಂಟರ್) ರಶ್ಮಿಕಾ ಮಂದಣ್ಣರನ್ನು ಭಾರತೀಯ ಸೈಬರ್ ಸುರಕ್ಷಾ ಕಾರ್ಯಕ್ರಮದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ, ಇನ್ನು ಮುಂದೆ ಅಪಾಯಕಾರಿ ಸೈಬರ್ ಕ್ರೈಂ, ಡೀಪ್ ಫೇಕ್ ವಿಡಿಯೋ, ಆನ್​ಲೈನ್ ಫ್ರಾಡ್ ಇನ್ನಿತರೆ ಸೈಬರ್ ಸಂಬಂಧಿ ಅಪರಾಧಗಳ ಕುರಿತಾಗಿ ಸಾಕ್ಷರತೆ, ಜಾಗೃತೆ ಮೂಡಿಸುವ ಕಾರ್ಯವನ್ನು ಮಾಡಲಿದ್ದಾರೆ.

ಈ ಕುರಿತು ಇನ್ಸ್ಪಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ‘ಸೈಬರ್ ಅಪರಾಧವು ಅಪಾಯಕಾರಿ ಮತ್ತು ವ್ಯಾಪಕವಾದ ಸಮಸ್ಯೆಯಾಗಿದೆ. ಅದು ಪ್ರಪಂಚದಾದ್ಯಂತ ಇರುವ ವ್ಯಕ್ತಿಗಳು, ವ್ಯವಹಾರಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ. ಸೈಬರ್ ಸಮಸ್ಯೆಯನ್ನು ಅನುಭವಿಸಿರುವ ವ್ಯಕ್ತಿಯಾಗಿ, ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ಸೈಬರ್ ಸುರಕ್ಷತೆಯ ಸಂದೇಶವನ್ನು ಪ್ರಚಾರ ಮಾಡಲು ನಾನು ಉತ್ಸುಕಗಳಾಗಿದ್ದೇನೆ. ಈ ಕಾರ್ಯದಲ್ಲಿ ನಾನು ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೇನೆ. ಈ ಸೈಬರ್ ಬೆದರಿಕೆಗಳನ್ನು ಎದುರಿಸಲು ಮತ್ತು ನಮ್ಮ ಡಿಜಿಟಲ್ ಸ್ಥಳಗಳನ್ನು ರಕ್ಷಿಸಲು ನಾವು ಒಗ್ಗೂಡುವುದು ಬಹಳ ಮುಖ್ಯವಾಗಿದೆ’ ಎಂದಿದ್ದಾರೆ.

ಕಳೆದ ವರ್ಷ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಯಾವುದೋ ಯುವತಿಯ ಅರೆಬೆತ್ತಲೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖವನ್ನು ಜೋಡಿಸಲಾಗಿತ್ತು. ವಿಡಿಯೋ ವೈರಲ್ ಆದ ಬಳಿಕ ಅಮಿತಾಬ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಹಲವರು ಆ ವಿಡಿಯೋವನ್ನು ವಿರೋಧಿಸುವ ಜೊತೆಗೆ ರಶ್ಮಿಕಾಗೆ ಬೆಂಬಲ ಸೂಚಿಸಿದ್ದರು. ಬಳಿಕ ಆ ವಿಡಿಯೋಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿತ್ತು.

ರಶ್ಮಿಕಾ ಮಂದಣ್ಣ ಪ್ರಸ್ತುತ ಕೆಲ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಲ್ಲಿ ವಿಕ್ಕಿ ಕೌಶನ್ ಜೊತೆ ನಟಿಸಿರುವ ‘ಛಾವಾ’ ಬಿಡುಗಡೆ ಆಗಬೇಕಿದೆ. ಇದರ ನಡುವೆ ಸಲ್ಮಾನ್ ಖಾನ್ ಜೊತೆ ‘ಸಿಖಂಧರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ನಟನೆಯ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಇನ್ನು ತೆಲುಗಿನಲ್ಲಿ ‘ಪುಷ್ಪ 2’, ‘ಗರ್ಲ್​ಫ್ರೆಂಡ್’, ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದಂ 2’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

25 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

30 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

39 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago