ದೇಶ- ವಿದೇಶ

ರಶ್ಮಿಕಾ ಮಂದಣ್ಣ ಈಗ ಸೈಬರ್ ಭದ್ರತಾ ರಾಯಭಾರಿ!

ಹೊಸದಿಲ್ಲಿ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ ಭಾರತದ ಸೈಬರ್ ಅಪರಾಧಗಳ ಸಮನ್ವಯ ಕೇಂದ್ರದ(ಐ4ಸಿ) ರಾಷ್ಟ್ರೀಯ ಬ್ರಾಂಡ್‌ ಅಂಬಾಸಿಡರ್‌ ಆಗಿ ನೇಮಕಗೊಂಡಿದ್ದಾರೆ.

ಈ ಹಿಂದೆ ರಶ್ಮಿಕ ಅವರ ಡೀಪ್ ಫೇಕ್ ವಿಡಿಯೊವೊಂದು ಈ ವರ್ಷದ ಆರಂಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಕೇಂದ್ರ ಗೃಹ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐ4ಸಿ (ಇಂಡಿಯನ್ ಸೈಬರ್​ಕ್ರೈಂ ಕೋಆರ್ಡಿನೇಷನ್ ಸೆಂಟರ್) ರಶ್ಮಿಕಾ ಮಂದಣ್ಣರನ್ನು ಭಾರತೀಯ ಸೈಬರ್ ಸುರಕ್ಷಾ ಕಾರ್ಯಕ್ರಮದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ, ಇನ್ನು ಮುಂದೆ ಅಪಾಯಕಾರಿ ಸೈಬರ್ ಕ್ರೈಂ, ಡೀಪ್ ಫೇಕ್ ವಿಡಿಯೋ, ಆನ್​ಲೈನ್ ಫ್ರಾಡ್ ಇನ್ನಿತರೆ ಸೈಬರ್ ಸಂಬಂಧಿ ಅಪರಾಧಗಳ ಕುರಿತಾಗಿ ಸಾಕ್ಷರತೆ, ಜಾಗೃತೆ ಮೂಡಿಸುವ ಕಾರ್ಯವನ್ನು ಮಾಡಲಿದ್ದಾರೆ.

ಈ ಕುರಿತು ಇನ್ಸ್ಪಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ‘ಸೈಬರ್ ಅಪರಾಧವು ಅಪಾಯಕಾರಿ ಮತ್ತು ವ್ಯಾಪಕವಾದ ಸಮಸ್ಯೆಯಾಗಿದೆ. ಅದು ಪ್ರಪಂಚದಾದ್ಯಂತ ಇರುವ ವ್ಯಕ್ತಿಗಳು, ವ್ಯವಹಾರಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ. ಸೈಬರ್ ಸಮಸ್ಯೆಯನ್ನು ಅನುಭವಿಸಿರುವ ವ್ಯಕ್ತಿಯಾಗಿ, ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ಸೈಬರ್ ಸುರಕ್ಷತೆಯ ಸಂದೇಶವನ್ನು ಪ್ರಚಾರ ಮಾಡಲು ನಾನು ಉತ್ಸುಕಗಳಾಗಿದ್ದೇನೆ. ಈ ಕಾರ್ಯದಲ್ಲಿ ನಾನು ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೇನೆ. ಈ ಸೈಬರ್ ಬೆದರಿಕೆಗಳನ್ನು ಎದುರಿಸಲು ಮತ್ತು ನಮ್ಮ ಡಿಜಿಟಲ್ ಸ್ಥಳಗಳನ್ನು ರಕ್ಷಿಸಲು ನಾವು ಒಗ್ಗೂಡುವುದು ಬಹಳ ಮುಖ್ಯವಾಗಿದೆ’ ಎಂದಿದ್ದಾರೆ.

ಕಳೆದ ವರ್ಷ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಯಾವುದೋ ಯುವತಿಯ ಅರೆಬೆತ್ತಲೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖವನ್ನು ಜೋಡಿಸಲಾಗಿತ್ತು. ವಿಡಿಯೋ ವೈರಲ್ ಆದ ಬಳಿಕ ಅಮಿತಾಬ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಹಲವರು ಆ ವಿಡಿಯೋವನ್ನು ವಿರೋಧಿಸುವ ಜೊತೆಗೆ ರಶ್ಮಿಕಾಗೆ ಬೆಂಬಲ ಸೂಚಿಸಿದ್ದರು. ಬಳಿಕ ಆ ವಿಡಿಯೋಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿತ್ತು.

ರಶ್ಮಿಕಾ ಮಂದಣ್ಣ ಪ್ರಸ್ತುತ ಕೆಲ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಲ್ಲಿ ವಿಕ್ಕಿ ಕೌಶನ್ ಜೊತೆ ನಟಿಸಿರುವ ‘ಛಾವಾ’ ಬಿಡುಗಡೆ ಆಗಬೇಕಿದೆ. ಇದರ ನಡುವೆ ಸಲ್ಮಾನ್ ಖಾನ್ ಜೊತೆ ‘ಸಿಖಂಧರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ನಟನೆಯ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಇನ್ನು ತೆಲುಗಿನಲ್ಲಿ ‘ಪುಷ್ಪ 2’, ‘ಗರ್ಲ್​ಫ್ರೆಂಡ್’, ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದಂ 2’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

3 hours ago