ಹೊಸದಿಲ್ಲಿ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ ಭಾರತದ ಸೈಬರ್ ಅಪರಾಧಗಳ ಸಮನ್ವಯ ಕೇಂದ್ರದ(ಐ4ಸಿ) ರಾಷ್ಟ್ರೀಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ.
ಈ ಹಿಂದೆ ರಶ್ಮಿಕ ಅವರ ಡೀಪ್ ಫೇಕ್ ವಿಡಿಯೊವೊಂದು ಈ ವರ್ಷದ ಆರಂಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಕೇಂದ್ರ ಗೃಹ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐ4ಸಿ (ಇಂಡಿಯನ್ ಸೈಬರ್ಕ್ರೈಂ ಕೋಆರ್ಡಿನೇಷನ್ ಸೆಂಟರ್) ರಶ್ಮಿಕಾ ಮಂದಣ್ಣರನ್ನು ಭಾರತೀಯ ಸೈಬರ್ ಸುರಕ್ಷಾ ಕಾರ್ಯಕ್ರಮದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ, ಇನ್ನು ಮುಂದೆ ಅಪಾಯಕಾರಿ ಸೈಬರ್ ಕ್ರೈಂ, ಡೀಪ್ ಫೇಕ್ ವಿಡಿಯೋ, ಆನ್ಲೈನ್ ಫ್ರಾಡ್ ಇನ್ನಿತರೆ ಸೈಬರ್ ಸಂಬಂಧಿ ಅಪರಾಧಗಳ ಕುರಿತಾಗಿ ಸಾಕ್ಷರತೆ, ಜಾಗೃತೆ ಮೂಡಿಸುವ ಕಾರ್ಯವನ್ನು ಮಾಡಲಿದ್ದಾರೆ.
ಈ ಕುರಿತು ಇನ್ಸ್ಪಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ‘ಸೈಬರ್ ಅಪರಾಧವು ಅಪಾಯಕಾರಿ ಮತ್ತು ವ್ಯಾಪಕವಾದ ಸಮಸ್ಯೆಯಾಗಿದೆ. ಅದು ಪ್ರಪಂಚದಾದ್ಯಂತ ಇರುವ ವ್ಯಕ್ತಿಗಳು, ವ್ಯವಹಾರಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ. ಸೈಬರ್ ಸಮಸ್ಯೆಯನ್ನು ಅನುಭವಿಸಿರುವ ವ್ಯಕ್ತಿಯಾಗಿ, ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ಸೈಬರ್ ಸುರಕ್ಷತೆಯ ಸಂದೇಶವನ್ನು ಪ್ರಚಾರ ಮಾಡಲು ನಾನು ಉತ್ಸುಕಗಳಾಗಿದ್ದೇನೆ. ಈ ಕಾರ್ಯದಲ್ಲಿ ನಾನು ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೇನೆ. ಈ ಸೈಬರ್ ಬೆದರಿಕೆಗಳನ್ನು ಎದುರಿಸಲು ಮತ್ತು ನಮ್ಮ ಡಿಜಿಟಲ್ ಸ್ಥಳಗಳನ್ನು ರಕ್ಷಿಸಲು ನಾವು ಒಗ್ಗೂಡುವುದು ಬಹಳ ಮುಖ್ಯವಾಗಿದೆ’ ಎಂದಿದ್ದಾರೆ.
ಕಳೆದ ವರ್ಷ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಯಾವುದೋ ಯುವತಿಯ ಅರೆಬೆತ್ತಲೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖವನ್ನು ಜೋಡಿಸಲಾಗಿತ್ತು. ವಿಡಿಯೋ ವೈರಲ್ ಆದ ಬಳಿಕ ಅಮಿತಾಬ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಹಲವರು ಆ ವಿಡಿಯೋವನ್ನು ವಿರೋಧಿಸುವ ಜೊತೆಗೆ ರಶ್ಮಿಕಾಗೆ ಬೆಂಬಲ ಸೂಚಿಸಿದ್ದರು. ಬಳಿಕ ಆ ವಿಡಿಯೋಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿತ್ತು.
ರಶ್ಮಿಕಾ ಮಂದಣ್ಣ ಪ್ರಸ್ತುತ ಕೆಲ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ನಲ್ಲಿ ವಿಕ್ಕಿ ಕೌಶನ್ ಜೊತೆ ನಟಿಸಿರುವ ‘ಛಾವಾ’ ಬಿಡುಗಡೆ ಆಗಬೇಕಿದೆ. ಇದರ ನಡುವೆ ಸಲ್ಮಾನ್ ಖಾನ್ ಜೊತೆ ‘ಸಿಖಂಧರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ನಟನೆಯ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಇನ್ನು ತೆಲುಗಿನಲ್ಲಿ ‘ಪುಷ್ಪ 2’, ‘ಗರ್ಲ್ಫ್ರೆಂಡ್’, ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದಂ 2’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…