ದೇಶ- ವಿದೇಶ

ರೆಪೋ ದರ ಶೇ.6ರಷ್ಟು ಕಡಿತಗೊಳಿಸಿದ ಆರ್‌ಬಿಐ ; EMI ಅಗ್ಗ

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೋ ದರದಲ್ಲಿ 25 ಬೇಸಿಸ್‌ಗಳಷ್ಟು ಕಡಿತಗೊಳಿಸಿ, ಅದನ್ನು ಶೇ.6ಕ್ಕೆ ಇಳಿಸಿದೆ.

ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಇದು ಅನುವು ಮಾಡಿಕೊಡುತ್ತದೆ. ಅಲ್ಲದೇ, ಸಾಲಗಳ ಮೇಲಿನ ಇಎಂಐಗಳ ಮೊತ್ತ ಕಡಿಮೆ ಮಾಡಲಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ, ರೆಪೊ ದರ ಕಡಿಮೆ ಮಾಡಲು ಹಣಕಾಸು ಸಮಿತಿಯು ಸರ್ವಾನುಮತದಿಂದ ಒಪ್ಪಿಕೆ ನೀಡಿದೆ. ಈ ವರ್ಷ 2ನೇ ಬಾರಿ ರೆಪೋ ದರವನ್ನು ಕಡಿಮೆ ಮಾಡಿದ್ದೇವೆ. ಇದಕ್ಕೂ ಮೊದಲು ಫೆಬ್ರವರಿಯಲ್ಲೂ ದರ ಕಡಿಮೆ ಆಗಿತ್ತು ಎಂದರು.

ಖರೀದಿ ಒಪ್ಪಂದದ ದರ ಎಂದು ಕರೆಯಲ್ಪಡುವ ರೆಪೋ ದರವೂ, ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಸಾಲದ ಮೇಲೆ ಆರ್‌ಬಿಐ ವಿಧಿಸುವ ಬಡ್ಡಿದರವಾಗಿದೆ. ಆದ್ದರಿಂದ ರೆಪೋ ದರ ಕಡಿಮೆ ಮಾಡಿದಾಗ, ಬ್ಯಾಂಕುಗಳಿಗೆ ಪ್ರಯೋಜನವಾಗುತ್ತವೆ. ಈ ಪ್ರಯೋಜನವನ್ನು ಬಹುತೇಕ ಬ್ಯಾಂಕುಗಳು ನಿಯಮಿತವಾಗಿ ಗ್ರಾಹಕರಿಗೆ ವರ್ಗಾಯಿಸುತ್ತವೆ.

ಜಾಗತಿಕ ಆರ್ಥಿಕತೆಗೆ ಆತಂಕಕಾರಿಯಾಗಿ ಹಣಕಾಸು ವರ್ಷ ಆರಂಭವಾಗುತ್ತಿದ್ದು, ಜಾಗತಿಕ ಅನಿಶ್ಚಿತತೆಗಳಿಂದ ಹೊರಹೊಮ್ಮುವ ಹಣದುಬ್ಬರದ ಅಪಾಯಗಳ ಮೇಲೆ, ಆರ್‌ಬಿಐ ತೀವ್ರ ನಿಗಾ ಇಟ್ಟಿದೆ ಎಂದು ಸಂಜಯ್‌ ಮಲ್ಹೋತ್ರಾ ಇದೇ ವೇಳೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

25 seconds ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

33 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

45 mins ago

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

2 hours ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

2 hours ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

3 hours ago