ದೇಶ- ವಿದೇಶ

ರೆಪೋ ದರ ಶೇ.6ರಷ್ಟು ಕಡಿತಗೊಳಿಸಿದ ಆರ್‌ಬಿಐ ; EMI ಅಗ್ಗ

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೋ ದರದಲ್ಲಿ 25 ಬೇಸಿಸ್‌ಗಳಷ್ಟು ಕಡಿತಗೊಳಿಸಿ, ಅದನ್ನು ಶೇ.6ಕ್ಕೆ ಇಳಿಸಿದೆ.

ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಇದು ಅನುವು ಮಾಡಿಕೊಡುತ್ತದೆ. ಅಲ್ಲದೇ, ಸಾಲಗಳ ಮೇಲಿನ ಇಎಂಐಗಳ ಮೊತ್ತ ಕಡಿಮೆ ಮಾಡಲಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ, ರೆಪೊ ದರ ಕಡಿಮೆ ಮಾಡಲು ಹಣಕಾಸು ಸಮಿತಿಯು ಸರ್ವಾನುಮತದಿಂದ ಒಪ್ಪಿಕೆ ನೀಡಿದೆ. ಈ ವರ್ಷ 2ನೇ ಬಾರಿ ರೆಪೋ ದರವನ್ನು ಕಡಿಮೆ ಮಾಡಿದ್ದೇವೆ. ಇದಕ್ಕೂ ಮೊದಲು ಫೆಬ್ರವರಿಯಲ್ಲೂ ದರ ಕಡಿಮೆ ಆಗಿತ್ತು ಎಂದರು.

ಖರೀದಿ ಒಪ್ಪಂದದ ದರ ಎಂದು ಕರೆಯಲ್ಪಡುವ ರೆಪೋ ದರವೂ, ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಸಾಲದ ಮೇಲೆ ಆರ್‌ಬಿಐ ವಿಧಿಸುವ ಬಡ್ಡಿದರವಾಗಿದೆ. ಆದ್ದರಿಂದ ರೆಪೋ ದರ ಕಡಿಮೆ ಮಾಡಿದಾಗ, ಬ್ಯಾಂಕುಗಳಿಗೆ ಪ್ರಯೋಜನವಾಗುತ್ತವೆ. ಈ ಪ್ರಯೋಜನವನ್ನು ಬಹುತೇಕ ಬ್ಯಾಂಕುಗಳು ನಿಯಮಿತವಾಗಿ ಗ್ರಾಹಕರಿಗೆ ವರ್ಗಾಯಿಸುತ್ತವೆ.

ಜಾಗತಿಕ ಆರ್ಥಿಕತೆಗೆ ಆತಂಕಕಾರಿಯಾಗಿ ಹಣಕಾಸು ವರ್ಷ ಆರಂಭವಾಗುತ್ತಿದ್ದು, ಜಾಗತಿಕ ಅನಿಶ್ಚಿತತೆಗಳಿಂದ ಹೊರಹೊಮ್ಮುವ ಹಣದುಬ್ಬರದ ಅಪಾಯಗಳ ಮೇಲೆ, ಆರ್‌ಬಿಐ ತೀವ್ರ ನಿಗಾ ಇಟ್ಟಿದೆ ಎಂದು ಸಂಜಯ್‌ ಮಲ್ಹೋತ್ರಾ ಇದೇ ವೇಳೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

40 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

47 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

2 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

2 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago