ದೇಶ- ವಿದೇಶ

ರೆಪೋ ದರ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

ಮುಂಬೈ: ಸತತ ಮೂರು ಬಡ್ಡಿ ಕಡಿತಗಳ ನಂತರ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಮತ್ತು ಶೇ.5.5 ರ ರೆಪೊ ದರವನ್ನು ಮುಂದಿನ ಮೂರು ತಿಂಗಳವರೆಗೆ ಮುಂದುವರೆಸಲು ತೀರ್ಮಾನಿಸಿದೆ.

ಸುಂಕದ ಅನಿಶ್ಚಿತತೆಗಳ ಬಗ್ಗೆ ಕಳವಳದಿಂದಾಗಿ ಇಂತಹ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲಾಗಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಪ್ರಸಕ್ತ ಹಣಕಾಸು ವರ್ಷದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಅವರು ಹಣಕಾಸು ವರ್ಷ 26ರ ಬೆಳವಣಿಗೆಯ ದರದ ಮುನ್ಸೂಚನೆಯನ್ನು ಶೇಕಡಾ 6.5 ರಷ್ಟು ಉಳಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಹಣಕಾಸು ನೀತಿ ಸಮಿತಿ (ಎಂಪಿಸಿ) ಅಲ್ಪಾವಧಿಯ ಸಾಲ ದರ ಅಥವಾ ರೆಪೊ ದರವನ್ನು ಶೇಕಡಾ 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

ಹಣದುಬ್ಬರ ಮುನ್ಸೂಚನೆಗೆ ಸಂಬಂಧಿಸಿದಂತೆ, ಗವರ್ನರ್ ಪ್ರಸ್ತುತ ಹಣಕಾಸು ವರ್ಷಕ್ಕೆ ಹಿಂದಿನ ಅಂದಾಜಿನ 3.7 ಪ್ರತಿಶತದಿಂದ 3.1 ಪ್ರತಿಶತಕ್ಕೆ ಇಳಿಸಿದ್ದಾರೆ.ಫೆಬ್ರವರಿ 2025 ರಿಂದ, ಆರ್‍ಬಿಐ ನೀತಿ ದರವನ್ನು 100 ಬೇಸಿಸ್ ಪಾಯಿಂಟ್‍ಗಳಿಂದ ಕಡಿಮೆ ಮಾಡಿತ್ತು.

ಜೂನ್‍ನಲ್ಲಿ ನಡೆದ ಹಿಂದಿನ ನೀತಿ ಪರಿಶೀಲನೆಯಲ್ಲಿ, ಅದು ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‍ಗಳಿಂದ 5.5 ಪ್ರತಿಶತಕ್ಕೆ ಇಳಿಸಿತ್ತು.ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು ಎರಡೂ ಕಡೆಗಳಲ್ಲಿ ಶೇ. 2 ರ ಅಂತರದಲ್ಲಿ ಶೇ. 4 ರಷ್ಟಿದ್ದು, ಎರಡೂ ಕಡೆ ಶೇ. 2 ರ ಅಂತರದಲ್ಲಿ ಉಳಿಯುವಂತೆ ನೋಡಿಕೊಳ್ಳುವ ಕಾರ್ಯವನ್ನು ಸರ್ಕಾರ ಕೇಂದ್ರ ಬ್ಯಾಂಕ್‍ಗೆ ವಹಿಸಿದೆ.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

7 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

8 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

9 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

10 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

14 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

14 hours ago