repo rate
ಮುಂಬೈ: ಸತತ ಮೂರು ಬಡ್ಡಿ ಕಡಿತಗಳ ನಂತರ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಮತ್ತು ಶೇ.5.5 ರ ರೆಪೊ ದರವನ್ನು ಮುಂದಿನ ಮೂರು ತಿಂಗಳವರೆಗೆ ಮುಂದುವರೆಸಲು ತೀರ್ಮಾನಿಸಿದೆ.
ಸುಂಕದ ಅನಿಶ್ಚಿತತೆಗಳ ಬಗ್ಗೆ ಕಳವಳದಿಂದಾಗಿ ಇಂತಹ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲಾಗಿದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ಪ್ರಸಕ್ತ ಹಣಕಾಸು ವರ್ಷದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಅವರು ಹಣಕಾಸು ವರ್ಷ 26ರ ಬೆಳವಣಿಗೆಯ ದರದ ಮುನ್ಸೂಚನೆಯನ್ನು ಶೇಕಡಾ 6.5 ರಷ್ಟು ಉಳಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಹಣಕಾಸು ನೀತಿ ಸಮಿತಿ (ಎಂಪಿಸಿ) ಅಲ್ಪಾವಧಿಯ ಸಾಲ ದರ ಅಥವಾ ರೆಪೊ ದರವನ್ನು ಶೇಕಡಾ 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.
ಹಣದುಬ್ಬರ ಮುನ್ಸೂಚನೆಗೆ ಸಂಬಂಧಿಸಿದಂತೆ, ಗವರ್ನರ್ ಪ್ರಸ್ತುತ ಹಣಕಾಸು ವರ್ಷಕ್ಕೆ ಹಿಂದಿನ ಅಂದಾಜಿನ 3.7 ಪ್ರತಿಶತದಿಂದ 3.1 ಪ್ರತಿಶತಕ್ಕೆ ಇಳಿಸಿದ್ದಾರೆ.ಫೆಬ್ರವರಿ 2025 ರಿಂದ, ಆರ್ಬಿಐ ನೀತಿ ದರವನ್ನು 100 ಬೇಸಿಸ್ ಪಾಯಿಂಟ್ಗಳಿಂದ ಕಡಿಮೆ ಮಾಡಿತ್ತು.
ಜೂನ್ನಲ್ಲಿ ನಡೆದ ಹಿಂದಿನ ನೀತಿ ಪರಿಶೀಲನೆಯಲ್ಲಿ, ಅದು ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ಗಳಿಂದ 5.5 ಪ್ರತಿಶತಕ್ಕೆ ಇಳಿಸಿತ್ತು.ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು ಎರಡೂ ಕಡೆಗಳಲ್ಲಿ ಶೇ. 2 ರ ಅಂತರದಲ್ಲಿ ಶೇ. 4 ರಷ್ಟಿದ್ದು, ಎರಡೂ ಕಡೆ ಶೇ. 2 ರ ಅಂತರದಲ್ಲಿ ಉಳಿಯುವಂತೆ ನೋಡಿಕೊಳ್ಳುವ ಕಾರ್ಯವನ್ನು ಸರ್ಕಾರ ಕೇಂದ್ರ ಬ್ಯಾಂಕ್ಗೆ ವಹಿಸಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…