ದೇಶ- ವಿದೇಶ

ಆರ್‌ಬಿಐನಿಂದ ಮಹತ್ವದ ಮಾಹಿತಿ: ರೈತರಿಗೆ ಅಡಮಾನ ರಹಿತ ಸಾಲದ ಮಿತಿ 2 ಲಕ್ಷಕ್ಕೆ ಹೆಚ್ಚಳ

ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ.

ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ ನಿರ್ದೇಶನವನ್ನು ಬ್ಯಾಂಕ್‌ಗಳಿಗೆ ಈಗಾಗಲೇ ತಿಳಿಸಿದ್ದು, ಜನವರಿಯಿಂದ ಜಾರಿಗ ತರಲು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡಿದೆ. ಜೊತೆಗೆ ದೇಶದಾದ್ಯಂತ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ 2 ಲಕ್ಷದವರೆಗಿನ ಸಾಲಕ್ಕೆ ಅಡಮಾನ ಅಥವಾ ಅಗತ್ಯ ದಾಖಲೆಗಳನ್ನು ತೆಗೆದುಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದೆ.

ಕೃಷಿಯಲ್ಲಿ ಹೆಚ್ಚುತ್ತಿರುವ ಮೂಲ ಬಂಡವಾಳ, ಬೀಜ ಹಾಗೂ ಗೊಬ್ಬರವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್‌ಬಿಐ ಹೇಳಿದೆ. ಇದರಿಂದಾಗಿ ಸಣ್ಣ ಹಾಗೂ ಅತೀ ಸಣ್ಣ ರೈತರನ್ನು ಒಳಗೊಂಡಂತೆ ಶೇಕಡಾ.86ರಷ್ಟು ರೈತರಿಗೆ ನೆರವಾಗಲಿದೆ ಎಂದು ಕೃಷಿ ಸಚಿವಾಲಯ ಹೇಳಿದೆ.

ಈ ಹೊಸ ಮಾರ್ಗಸೂಚಿ ರೈತರಿಗೆ ಬೇಗ ತಲುಪಿಸುವ ಉದ್ದೇಶದಿಂದ ಪ್ರಚಾರ ಕೈಗೊಳ್ಳುವಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ. ಇದರ ಜೊತೆಯಲ್ಲಿ ರೈತರು ಕಿಸಾನ್‌ ಕಾರ್ಡ್‌ ಬಳಸಿದರೆ ಶೇಕಡಾ.4ರ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಸಾಲ ಪಡೆಯಬಹುದು ಎಂದು ತಿಳಿಸಲಾಗಿದೆ.

ಹಣಕಾಸು ವಲಯದ ವ್ಯಾಪ್ತಿಗೆ ಕೃಷಿ ಕ್ಷೇತ್ರದ ಪಾಲನ್ನು ಹೆಚ್ಚಿಸುವುದು. ರೈತರು ಕೃಷಿ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಜೀವನ ಕ್ರಮ ಸುಧಾರಿಸುವುದು ಹಾಗೂ ಅವರ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಸರ್ಕಾರದ ಉದ್ದೇಶ ಎಂದು ಹೇಳಿದೆ.

ಈ ಮೂಲಕ ಅನ್ನದಾತರಿಗೆ ಆರ್‌ಬಿಐ ಗುಡ್‌ನ್ಯೂಸ್‌ ನೀಡಿದ್ದು, ಇದು ಮುಂದಿನ ದಿನಗಳಲ್ಲಿ ರೈತರಿಗೆ ವರದಾನವಾಗಲಿದೆ. ಹೀಗಾಗಿ ಮತ್ತಷ್ಟು ಯುವಕರು ಕೃಷಿಯತ್ತ ಮುಖಮಾಡಲು ಇದು ಸಂಪೂರ್ಣ ಸಹಕಾರಿಯಾಗಲಿದೆ.

 

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

30 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

1 hour ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

2 hours ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 hours ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

3 hours ago