ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂಕ್ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ.
ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್ಬಿಐನ ಈ ಹೊಸ ನಿರ್ದೇಶನವನ್ನು ಬ್ಯಾಂಕ್ಗಳಿಗೆ ಈಗಾಗಲೇ ತಿಳಿಸಿದ್ದು, ಜನವರಿಯಿಂದ ಜಾರಿಗ ತರಲು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡಿದೆ. ಜೊತೆಗೆ ದೇಶದಾದ್ಯಂತ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ 2 ಲಕ್ಷದವರೆಗಿನ ಸಾಲಕ್ಕೆ ಅಡಮಾನ ಅಥವಾ ಅಗತ್ಯ ದಾಖಲೆಗಳನ್ನು ತೆಗೆದುಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದೆ.
ಕೃಷಿಯಲ್ಲಿ ಹೆಚ್ಚುತ್ತಿರುವ ಮೂಲ ಬಂಡವಾಳ, ಬೀಜ ಹಾಗೂ ಗೊಬ್ಬರವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್ಬಿಐ ಹೇಳಿದೆ. ಇದರಿಂದಾಗಿ ಸಣ್ಣ ಹಾಗೂ ಅತೀ ಸಣ್ಣ ರೈತರನ್ನು ಒಳಗೊಂಡಂತೆ ಶೇಕಡಾ.86ರಷ್ಟು ರೈತರಿಗೆ ನೆರವಾಗಲಿದೆ ಎಂದು ಕೃಷಿ ಸಚಿವಾಲಯ ಹೇಳಿದೆ.
ಈ ಹೊಸ ಮಾರ್ಗಸೂಚಿ ರೈತರಿಗೆ ಬೇಗ ತಲುಪಿಸುವ ಉದ್ದೇಶದಿಂದ ಪ್ರಚಾರ ಕೈಗೊಳ್ಳುವಂತೆ ಬ್ಯಾಂಕ್ಗಳಿಗೆ ಸೂಚನೆ ನೀಡಿದೆ. ಇದರ ಜೊತೆಯಲ್ಲಿ ರೈತರು ಕಿಸಾನ್ ಕಾರ್ಡ್ ಬಳಸಿದರೆ ಶೇಕಡಾ.4ರ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಸಾಲ ಪಡೆಯಬಹುದು ಎಂದು ತಿಳಿಸಲಾಗಿದೆ.
ಹಣಕಾಸು ವಲಯದ ವ್ಯಾಪ್ತಿಗೆ ಕೃಷಿ ಕ್ಷೇತ್ರದ ಪಾಲನ್ನು ಹೆಚ್ಚಿಸುವುದು. ರೈತರು ಕೃಷಿ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಜೀವನ ಕ್ರಮ ಸುಧಾರಿಸುವುದು ಹಾಗೂ ಅವರ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಸರ್ಕಾರದ ಉದ್ದೇಶ ಎಂದು ಹೇಳಿದೆ.
ಈ ಮೂಲಕ ಅನ್ನದಾತರಿಗೆ ಆರ್ಬಿಐ ಗುಡ್ನ್ಯೂಸ್ ನೀಡಿದ್ದು, ಇದು ಮುಂದಿನ ದಿನಗಳಲ್ಲಿ ರೈತರಿಗೆ ವರದಾನವಾಗಲಿದೆ. ಹೀಗಾಗಿ ಮತ್ತಷ್ಟು ಯುವಕರು ಕೃಷಿಯತ್ತ ಮುಖಮಾಡಲು ಇದು ಸಂಪೂರ್ಣ ಸಹಕಾರಿಯಾಗಲಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…