ದೇಶ- ವಿದೇಶ

ಆರ್‌ಬಿಐನಿಂದ ಮಹತ್ವದ ಮಾಹಿತಿ: ರೈತರಿಗೆ ಅಡಮಾನ ರಹಿತ ಸಾಲದ ಮಿತಿ 2 ಲಕ್ಷಕ್ಕೆ ಹೆಚ್ಚಳ

ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ.

ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ ನಿರ್ದೇಶನವನ್ನು ಬ್ಯಾಂಕ್‌ಗಳಿಗೆ ಈಗಾಗಲೇ ತಿಳಿಸಿದ್ದು, ಜನವರಿಯಿಂದ ಜಾರಿಗ ತರಲು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡಿದೆ. ಜೊತೆಗೆ ದೇಶದಾದ್ಯಂತ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ 2 ಲಕ್ಷದವರೆಗಿನ ಸಾಲಕ್ಕೆ ಅಡಮಾನ ಅಥವಾ ಅಗತ್ಯ ದಾಖಲೆಗಳನ್ನು ತೆಗೆದುಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದೆ.

ಕೃಷಿಯಲ್ಲಿ ಹೆಚ್ಚುತ್ತಿರುವ ಮೂಲ ಬಂಡವಾಳ, ಬೀಜ ಹಾಗೂ ಗೊಬ್ಬರವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್‌ಬಿಐ ಹೇಳಿದೆ. ಇದರಿಂದಾಗಿ ಸಣ್ಣ ಹಾಗೂ ಅತೀ ಸಣ್ಣ ರೈತರನ್ನು ಒಳಗೊಂಡಂತೆ ಶೇಕಡಾ.86ರಷ್ಟು ರೈತರಿಗೆ ನೆರವಾಗಲಿದೆ ಎಂದು ಕೃಷಿ ಸಚಿವಾಲಯ ಹೇಳಿದೆ.

ಈ ಹೊಸ ಮಾರ್ಗಸೂಚಿ ರೈತರಿಗೆ ಬೇಗ ತಲುಪಿಸುವ ಉದ್ದೇಶದಿಂದ ಪ್ರಚಾರ ಕೈಗೊಳ್ಳುವಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ. ಇದರ ಜೊತೆಯಲ್ಲಿ ರೈತರು ಕಿಸಾನ್‌ ಕಾರ್ಡ್‌ ಬಳಸಿದರೆ ಶೇಕಡಾ.4ರ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಸಾಲ ಪಡೆಯಬಹುದು ಎಂದು ತಿಳಿಸಲಾಗಿದೆ.

ಹಣಕಾಸು ವಲಯದ ವ್ಯಾಪ್ತಿಗೆ ಕೃಷಿ ಕ್ಷೇತ್ರದ ಪಾಲನ್ನು ಹೆಚ್ಚಿಸುವುದು. ರೈತರು ಕೃಷಿ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಜೀವನ ಕ್ರಮ ಸುಧಾರಿಸುವುದು ಹಾಗೂ ಅವರ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಸರ್ಕಾರದ ಉದ್ದೇಶ ಎಂದು ಹೇಳಿದೆ.

ಈ ಮೂಲಕ ಅನ್ನದಾತರಿಗೆ ಆರ್‌ಬಿಐ ಗುಡ್‌ನ್ಯೂಸ್‌ ನೀಡಿದ್ದು, ಇದು ಮುಂದಿನ ದಿನಗಳಲ್ಲಿ ರೈತರಿಗೆ ವರದಾನವಾಗಲಿದೆ. ಹೀಗಾಗಿ ಮತ್ತಷ್ಟು ಯುವಕರು ಕೃಷಿಯತ್ತ ಮುಖಮಾಡಲು ಇದು ಸಂಪೂರ್ಣ ಸಹಕಾರಿಯಾಗಲಿದೆ.

 

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

2 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

2 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

3 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

4 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

4 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

6 hours ago