ದೇಶ- ವಿದೇಶ

ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ನನ್ನು ಭೇಟಿಯಾದ ರಿಯಲ್‌ ಸ್ಟಾರ್‌ ಉಪ್ಪಿ

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ.

ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಹೀಗಾಗಿ ಯುಐ ಸಿನಿಮಾದ ಪ್ರಮೋಷನ್‌ಗಾಗಿ ಹೈದರಾಬಾದ್‌ಗೆ ತೆರಳಿದ ವೇಳೆ ಉಪೇಂದ್ರ ಅವರು ಪುಷ್ಪಾ-2 ಸಿನಿಮಾದ ನಾಯಕ ಅಲ್ಲು ಅರ್ಜುನ್‌ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ಇಂದು(ಡಿ.14) ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿರುವ ಅಲ್ಲು ಅರ್ಜುನ್‌ ಮನೆಗೆ ತೆರಳಿ ಕ್ಷೇಮ-ಕುಶಲೋಪರಿಯನ್ನು ವಿಚಾರಿಸಿದ್ದಾರೆ.

ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಅಲ್ಲು ಅರ್ಜುನ್‌ ಅವರು ಈ ಹಿಂದೆ ʼಸನ್‌ ಆಫ್‌ ಸತ್ಯಮೂರ್ತಿʼ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. ಹಾಗಾಗಿ ಇವರಿಬ್ಬರ ಗೆಳೆತನ ಉತ್ತಮವಾಗಿದ್ದು, ತಮ್ಮ ಸಿನಿಮಾಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಉಪೇಂದ್ರ ನಟಿಸಿ ನಿರ್ಮಾಣ ಮಾಡಿರುವ ʼಯುಐʼ ಚಿತ್ರದ ಟ್ರೇಲರ್‌ ನೋಡಿ ಈಗಾಗಲೇ ಬಾಲಿವುಡ್‌ ನಟ ಅಮೀರ್‌ ಖಾನ್‌ ಟ್ರೇಲರ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅವರ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

5 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

5 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

6 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

7 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

7 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

7 hours ago