ದೇಶ- ವಿದೇಶ

ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ನನ್ನು ಭೇಟಿಯಾದ ರಿಯಲ್‌ ಸ್ಟಾರ್‌ ಉಪ್ಪಿ

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ.

ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಹೀಗಾಗಿ ಯುಐ ಸಿನಿಮಾದ ಪ್ರಮೋಷನ್‌ಗಾಗಿ ಹೈದರಾಬಾದ್‌ಗೆ ತೆರಳಿದ ವೇಳೆ ಉಪೇಂದ್ರ ಅವರು ಪುಷ್ಪಾ-2 ಸಿನಿಮಾದ ನಾಯಕ ಅಲ್ಲು ಅರ್ಜುನ್‌ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ಇಂದು(ಡಿ.14) ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿರುವ ಅಲ್ಲು ಅರ್ಜುನ್‌ ಮನೆಗೆ ತೆರಳಿ ಕ್ಷೇಮ-ಕುಶಲೋಪರಿಯನ್ನು ವಿಚಾರಿಸಿದ್ದಾರೆ.

ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಅಲ್ಲು ಅರ್ಜುನ್‌ ಅವರು ಈ ಹಿಂದೆ ʼಸನ್‌ ಆಫ್‌ ಸತ್ಯಮೂರ್ತಿʼ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. ಹಾಗಾಗಿ ಇವರಿಬ್ಬರ ಗೆಳೆತನ ಉತ್ತಮವಾಗಿದ್ದು, ತಮ್ಮ ಸಿನಿಮಾಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಉಪೇಂದ್ರ ನಟಿಸಿ ನಿರ್ಮಾಣ ಮಾಡಿರುವ ʼಯುಐʼ ಚಿತ್ರದ ಟ್ರೇಲರ್‌ ನೋಡಿ ಈಗಾಗಲೇ ಬಾಲಿವುಡ್‌ ನಟ ಅಮೀರ್‌ ಖಾನ್‌ ಟ್ರೇಲರ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅವರ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

5 mins ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

32 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

37 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

49 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

2 hours ago