ದೇಶ- ವಿದೇಶ

ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ನನ್ನು ಭೇಟಿಯಾದ ರಿಯಲ್‌ ಸ್ಟಾರ್‌ ಉಪ್ಪಿ

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ.

ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಹೀಗಾಗಿ ಯುಐ ಸಿನಿಮಾದ ಪ್ರಮೋಷನ್‌ಗಾಗಿ ಹೈದರಾಬಾದ್‌ಗೆ ತೆರಳಿದ ವೇಳೆ ಉಪೇಂದ್ರ ಅವರು ಪುಷ್ಪಾ-2 ಸಿನಿಮಾದ ನಾಯಕ ಅಲ್ಲು ಅರ್ಜುನ್‌ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ಇಂದು(ಡಿ.14) ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿರುವ ಅಲ್ಲು ಅರ್ಜುನ್‌ ಮನೆಗೆ ತೆರಳಿ ಕ್ಷೇಮ-ಕುಶಲೋಪರಿಯನ್ನು ವಿಚಾರಿಸಿದ್ದಾರೆ.

ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಅಲ್ಲು ಅರ್ಜುನ್‌ ಅವರು ಈ ಹಿಂದೆ ʼಸನ್‌ ಆಫ್‌ ಸತ್ಯಮೂರ್ತಿʼ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. ಹಾಗಾಗಿ ಇವರಿಬ್ಬರ ಗೆಳೆತನ ಉತ್ತಮವಾಗಿದ್ದು, ತಮ್ಮ ಸಿನಿಮಾಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಉಪೇಂದ್ರ ನಟಿಸಿ ನಿರ್ಮಾಣ ಮಾಡಿರುವ ʼಯುಐʼ ಚಿತ್ರದ ಟ್ರೇಲರ್‌ ನೋಡಿ ಈಗಾಗಲೇ ಬಾಲಿವುಡ್‌ ನಟ ಅಮೀರ್‌ ಖಾನ್‌ ಟ್ರೇಲರ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅವರ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

1 hour ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

7 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

7 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

7 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

8 hours ago