ದೇಶ- ವಿದೇಶ

ಮುಂಬೈನಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಣೆ

ಮುಂಬೈ: ಮುಂಬೈನಲ್ಲಿ ಕಳೆದ ರಾತ್ರಿಯಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯಿಂದ ದೈನಂದಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಿಖ್ರೋಲಿಯಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ.

ವಿಖ್ರೋಲಿಯಲ್ಲಿ ಭಾರೀ ಮಳೆಯಿಂದ ಮನೆ ಧ್ವಂಸವಾಗಿದ್ದು, ಕುಟುಂಬದ ನಾಲ್ವರು ಸದಸ್ಯರು ಮನೆಯಲ್ಲಿದ್ದಾಗಲೇ ಈ ದುರಂತ ಸಂಭವಿಸಿದೆ. ಸಮೀಪದಲ್ಲೇ ಇದ್ದ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಯಾನ್‌, ಕುರ್ಲಾ, ಚೆಂಬೂರ್‌ ಹಾಗೂ ಅಂಧೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಮುಂಬೈ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ರವಾನೆ ಮಾಡಿದ್ದು, ಜನರು ಅನಗತ್ಯವಾಗಿ ರಸ್ತೆಗಳಲ್ಲಿ ಪ್ರಯಾಣ ಮಾಡದಂತೆ ಸಲಹೆ ನೀಡುತ್ತಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 hour ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago