ದೇಶ- ವಿದೇಶ

ಖ್ಯಾತ ನಟ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶ.?

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಎಂಎನ್‍ಎಂ ನಾಯಕ ಕಮಲ್ ಹಾಸನ್, ಡಿಎಂಕೆ ಜೊತೆ ಚುನಾವಣಾ ಒಪ್ಪಂದ ಮಾಡಿಕೊಂಡ ನಂತರ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಪಿಎಂಕೆ ಸಂಸದ ಅನ್ಬುಮಣಿ ರಾಮದಾಸ್ ಅವರಿಗೆ ಯಾವುದೇ ದೊಡ್ಡ ದ್ರಾವಿಡ ಪಕ್ಷಗಳ ಬೆಂಬಲವಿಲ್ಲದ ಕಾರಣ ತಮ್ಮ ಸ್ಥಾನ ಉಳಿಸಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ಮುಂಬರುವ ರಾಜ್ಯಸಭಾ ಚುನಾವಣೆಗಳು ತಮಿಳುನಾಡಿನಲ್ಲಿ ಗಮನಾರ್ಹ ರಾಜಕೀಯ ಸಂಚಲನವನ್ನು ಸೃಷ್ಟಿಸುತ್ತಿವೆ. ಡಿಎಂಕೆ ಮತ್ತು ಎಐಎಡಿಎಂಕೆ ಕ್ರಮವಾಗಿ ನಾಲ್ಕು ಮತ್ತು ಎರಡು ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ರಾಜ್ಯಸಭಾ ಚುನಾವಣೆ ಜೂನ್.19ರಂದು ನಡೆಯಲಿದ್ದು, ಮತಗಳ ಎಣಿಕೆ ಅದೇ ದಿನ ಸಂಜೆ 5 ಗಂಟೆಗೆ ನಡೆಯಲಿದೆ. ಎಂ ಷಣ್ಮುಗಂ, ಎಂ ಮೊಹಮದ್ ಅಬ್ದುಲ್ಲಾ ಮತ್ತು ಪಿ ವಿಲ್ಸನ್ (ಎಲ್ಲರೂ ಡಿಎಂಕೆ), ವೈಕೊ (ಎಂಡಿಎಂಕೆ) ಮತ್ತು ಅನ್ಬುಮಣಿ ಅವರ ಅವಧಿ ಮುಗಿದ ನಂತರ ಚುನಾವಣೆ ನಡೆಸಬೇಕಾಗಿದೆ.

2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಡಿಎಂಕೆ ನಾಯಕತ್ವದೊಂದಿಗೆ ನಡೆದ ಚುನಾವಣಾ ಒಪ್ಪಂದದಿಂದಾಗಿ ಕಮಲ್ ಹಾಸನ್ ರಾಜ್ಯಸಭಾ ಸದಸ್ಯರಾಗಲು ಸಜ್ಜಾಗಿದ್ದಾರೆ. ಅವರ ಪಕ್ಷ ಎಂಎನ್‍ಎಂ ಅವರ ಉಮೇದುವಾರಿಕೆಯನ್ನು ಅಧಿಕೃತಗೊಳಿಸಲು ಸಿದ್ಧತೆ ನಡೆಸುತ್ತಿದೆ.

ಕಮಲ್ ಹಾಸನ್ ನೇತೃತ್ವದ ಎಂಎನ್‍ಎಂನ ಕೇಂದ್ರ ಆಡಳಿತ ಮಂಡಳಿ ಮತ್ತು ಕಾರ್ಯಕಾರಿ ಸಮಿತಿ ಬುಧವಾರ ಅಥವಾ ಗುರುವಾರ ಸಭೆ ಸೇರಿ ಅವರ ಉಮೇದುವಾರಿಕೆಯನ್ನು ಅನುಮೋದಿಸುತ್ತದೆ ಎಂದು ಎಂಎನ್‍ಎಂ ನಾಯಕರೊಬ್ಬರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago