ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಎಂಎನ್ಎಂ ನಾಯಕ ಕಮಲ್ ಹಾಸನ್, ಡಿಎಂಕೆ ಜೊತೆ ಚುನಾವಣಾ ಒಪ್ಪಂದ ಮಾಡಿಕೊಂಡ ನಂತರ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಪಿಎಂಕೆ ಸಂಸದ ಅನ್ಬುಮಣಿ ರಾಮದಾಸ್ ಅವರಿಗೆ ಯಾವುದೇ ದೊಡ್ಡ ದ್ರಾವಿಡ ಪಕ್ಷಗಳ ಬೆಂಬಲವಿಲ್ಲದ ಕಾರಣ ತಮ್ಮ ಸ್ಥಾನ ಉಳಿಸಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ಮುಂಬರುವ ರಾಜ್ಯಸಭಾ ಚುನಾವಣೆಗಳು ತಮಿಳುನಾಡಿನಲ್ಲಿ ಗಮನಾರ್ಹ ರಾಜಕೀಯ ಸಂಚಲನವನ್ನು ಸೃಷ್ಟಿಸುತ್ತಿವೆ. ಡಿಎಂಕೆ ಮತ್ತು ಎಐಎಡಿಎಂಕೆ ಕ್ರಮವಾಗಿ ನಾಲ್ಕು ಮತ್ತು ಎರಡು ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.
ರಾಜ್ಯಸಭಾ ಚುನಾವಣೆ ಜೂನ್.19ರಂದು ನಡೆಯಲಿದ್ದು, ಮತಗಳ ಎಣಿಕೆ ಅದೇ ದಿನ ಸಂಜೆ 5 ಗಂಟೆಗೆ ನಡೆಯಲಿದೆ. ಎಂ ಷಣ್ಮುಗಂ, ಎಂ ಮೊಹಮದ್ ಅಬ್ದುಲ್ಲಾ ಮತ್ತು ಪಿ ವಿಲ್ಸನ್ (ಎಲ್ಲರೂ ಡಿಎಂಕೆ), ವೈಕೊ (ಎಂಡಿಎಂಕೆ) ಮತ್ತು ಅನ್ಬುಮಣಿ ಅವರ ಅವಧಿ ಮುಗಿದ ನಂತರ ಚುನಾವಣೆ ನಡೆಸಬೇಕಾಗಿದೆ.
2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಡಿಎಂಕೆ ನಾಯಕತ್ವದೊಂದಿಗೆ ನಡೆದ ಚುನಾವಣಾ ಒಪ್ಪಂದದಿಂದಾಗಿ ಕಮಲ್ ಹಾಸನ್ ರಾಜ್ಯಸಭಾ ಸದಸ್ಯರಾಗಲು ಸಜ್ಜಾಗಿದ್ದಾರೆ. ಅವರ ಪಕ್ಷ ಎಂಎನ್ಎಂ ಅವರ ಉಮೇದುವಾರಿಕೆಯನ್ನು ಅಧಿಕೃತಗೊಳಿಸಲು ಸಿದ್ಧತೆ ನಡೆಸುತ್ತಿದೆ.
ಕಮಲ್ ಹಾಸನ್ ನೇತೃತ್ವದ ಎಂಎನ್ಎಂನ ಕೇಂದ್ರ ಆಡಳಿತ ಮಂಡಳಿ ಮತ್ತು ಕಾರ್ಯಕಾರಿ ಸಮಿತಿ ಬುಧವಾರ ಅಥವಾ ಗುರುವಾರ ಸಭೆ ಸೇರಿ ಅವರ ಉಮೇದುವಾರಿಕೆಯನ್ನು ಅನುಮೋದಿಸುತ್ತದೆ ಎಂದು ಎಂಎನ್ಎಂ ನಾಯಕರೊಬ್ಬರು ಹೇಳಿದ್ದಾರೆ.
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…
ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…