ದೇಶ- ವಿದೇಶ

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನಿನ್ನೆ (ಏಪ್ರಿಲ್ 11) ರಂದು ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಂಗೀತ ಕ್ಷೇತ್ರದ ಸೆಲಬ್ರಿಟಿಗಳು, ಆಶಾ ಭೋಸ್ಲೆ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದರು, ಆದರೆ ಪ್ರಾರ್ಥನೆ ಫಲ ನೀಡಿಲ್ಲ. ಆಶಾ ಭೋಸ್ಲೆ ಅವರು ನಿಧನ ಹೊಂದಿದ್ದು, ಭಾರತೀಯ ಚಿತ್ರರಂಗ ಅದ್ಭುತ ಗಾಯಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

ಆಶಾ ಭೋಸ್ಲೆ ಅವರು ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಮಲಯಾಳಂ, ಅಸ್ಸಾಮೀಸ್, ಭೋಜ್​​ಪುರಿ, ನೇಪಾಳಿ, ಬೆಂಗಾಲಿ ಇನ್ನೂ ಹಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಗಾಯನಕ್ಕೆ ಎರಡು ರಾಷ್ಟ್ರಪ್ರಶಸ್ತಿ ಸೇರಿದಂತೆ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರು ಫಿಲಂ ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಶಾ ಅವರ ಹಾಡುಗಳು ಮೂರು ಬಾರಿ ಪ್ರತಿಷ್ಠಿತ ಗ್ರಾಮಿಗೆ ನಾಮಿನೇಟ್ ಸಹ ಆಗಿದ್ದವು. ಸುಮಾರು ಲಕ್ಷಕ್ಕೂ ಹೆಚ್ಚು ಹಾಡುಗಳನ್ನು ಅವರು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago