ದೇಶ- ವಿದೇಶ

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನಿನ್ನೆ (ಏಪ್ರಿಲ್ 11) ರಂದು ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಂಗೀತ ಕ್ಷೇತ್ರದ ಸೆಲಬ್ರಿಟಿಗಳು, ಆಶಾ ಭೋಸ್ಲೆ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದರು, ಆದರೆ ಪ್ರಾರ್ಥನೆ ಫಲ ನೀಡಿಲ್ಲ. ಆಶಾ ಭೋಸ್ಲೆ ಅವರು ನಿಧನ ಹೊಂದಿದ್ದು, ಭಾರತೀಯ ಚಿತ್ರರಂಗ ಅದ್ಭುತ ಗಾಯಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

ಆಶಾ ಭೋಸ್ಲೆ ಅವರು ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಮಲಯಾಳಂ, ಅಸ್ಸಾಮೀಸ್, ಭೋಜ್​​ಪುರಿ, ನೇಪಾಳಿ, ಬೆಂಗಾಲಿ ಇನ್ನೂ ಹಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಗಾಯನಕ್ಕೆ ಎರಡು ರಾಷ್ಟ್ರಪ್ರಶಸ್ತಿ ಸೇರಿದಂತೆ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರು ಫಿಲಂ ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಶಾ ಅವರ ಹಾಡುಗಳು ಮೂರು ಬಾರಿ ಪ್ರತಿಷ್ಠಿತ ಗ್ರಾಮಿಗೆ ನಾಮಿನೇಟ್ ಸಹ ಆಗಿದ್ದವು. ಸುಮಾರು ಲಕ್ಷಕ್ಕೂ ಹೆಚ್ಚು ಹಾಡುಗಳನ್ನು ಅವರು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago