ನವದೆಹಲಿ: 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಅಗ್ನಿಶಾಮಕ, ನಾಗರೀಕ ರಕ್ಷಣೆ ಸೇರಿ ಒಟ್ಟು 942 ಪೊಲೀಸ್ ಸಿಬ್ಬಂದಿಗೆ ವಿವಿಧ ಶೌರ್ಯ ಹಾಗೂ ಸೇವಾ ಪದಕಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಕೇಂದ್ರ ಸರ್ಕಾರವೂ ಇಂದು(ಜನವರಿ.25) ಅಧಿಕೃತವಾಗಿ ಘೋಷಣೆ ಹೊರಡಿಸಿದ್ದು, ಇದರಲ್ಲಿ 95 ಶೌರ್ಯ ಪ್ರಶಸ್ತಿಗಳಿವೆ. ಅಲ್ಲದೇ ಪದಕ ಪುರಸ್ಕೃತರಲ್ಲಿ ವೈಯಕ್ತಿಕ ಸಿಬ್ಬಂದಿ, ಅಗ್ನಿಶಾಮಕ, ಹೋಮ್ ಗಾರ್ಡ್ ಹಾಗೂ ನಾಗರೀಕ ಸೇವಾ ಸಿಬ್ಬಂದಿ ಸೇರಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಈ ಪ್ರಶಸ್ತಿಯಲ್ಲಿ ತಲಾ 28 ಜನ ಎಡಪಂಥೀಯ ತೀವ್ರಗಾಮಿ ಹೋರಾಟಗಾರರು ಇರುವ ಪ್ರದೇಶದಲ್ಲಿ ಹಾಗೂ ಜಮ್ಮು ಮತ್ತು ಕಾಶ್ಮೀರ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವವರು. ಈಶಾನ್ಯ ಭಾರತದ ಮೂರು ಜನ ಹಾಗೂ ಉಳಿದ 26 ಜನ ದೇಶದ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದೆ.
ಇನ್ನೂ 101 ಜನರಿಗೆ ರಾಷ್ಟ್ರಪತಿ ಪದಕ, 85 ಜನ ಪೊಲೀಸ್ ಸಿಬ್ಬಂದಿ, 5 ಜನ ಅಗ್ನಿಶಾಮಕ ಸಿಬ್ಬಂದಿ, 7 ನಾಗರೀಕ ಸೇವಾ ಸಿಬ್ಬಂದಿ, ಹೋಮ್ಗಾರ್ಡ್ಗಳು ಹಾಗೂ 4 ಇತರೆ ಸಿಬ್ಬಂದಿಗಳಿದ್ದಾರೆ. ಜೊತೆಗೆ 746 ಸೇವಾ ಪದಕಗಳ ಪೈಕಿ, 37 ಅಗ್ನಿಶಾಮಕ, 39 ನಾಗರೀಕ ರಕ್ಷಣಾ, 634 ಪೊಲೀಸ್, ಹೋಮ್ಗಾರ್ಡ್ ಹಾಗೂ 36 ಇತರೆ ಸಿಬ್ಬಂದಿಗಳಿಗೆ ವಿತರಿಸಲಾಗುವುದು ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…
ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…