ದೇಶ- ವಿದೇಶ

ಗಣರಾಜ್ಯೋತ್ಸವ-2025: 942 ಪೊಲೀಸ್‌ ಸಿಬ್ಬಂದಿಗೆ ಶೌರ್ಯ, ಸೇವಾ ಪದಕ ಘೋಷಣೆ

ನವದೆಹಲಿ: 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಅಗ್ನಿಶಾಮಕ, ನಾಗರೀಕ ರಕ್ಷಣೆ ಸೇರಿ ಒಟ್ಟು 942 ಪೊಲೀಸ್‌ ಸಿಬ್ಬಂದಿಗೆ ವಿವಿಧ ಶೌರ್ಯ ಹಾಗೂ ಸೇವಾ ಪದಕಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಕೇಂದ್ರ ಸರ್ಕಾರವೂ ಇಂದು(ಜನವರಿ.25) ಅಧಿಕೃತವಾಗಿ ಘೋಷಣೆ ಹೊರಡಿಸಿದ್ದು, ಇದರಲ್ಲಿ 95 ಶೌರ್ಯ ಪ್ರಶಸ್ತಿಗಳಿವೆ. ಅಲ್ಲದೇ ಪದಕ ಪುರಸ್ಕೃತರಲ್ಲಿ ವೈಯಕ್ತಿಕ ಸಿಬ್ಬಂದಿ, ಅಗ್ನಿಶಾಮಕ, ಹೋಮ್‌ ಗಾರ್ಡ್‌ ಹಾಗೂ ನಾಗರೀಕ ಸೇವಾ ಸಿಬ್ಬಂದಿ ಸೇರಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಈ ಪ್ರಶಸ್ತಿಯಲ್ಲಿ ತಲಾ 28 ಜನ ಎಡಪಂಥೀಯ ತೀವ್ರಗಾಮಿ ಹೋರಾಟಗಾರರು ಇರುವ ಪ್ರದೇಶದಲ್ಲಿ ಹಾಗೂ ಜಮ್ಮು ಮತ್ತು ಕಾಶ್ಮೀರ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವವರು. ಈಶಾನ್ಯ ಭಾರತದ ಮೂರು ಜನ ಹಾಗೂ ಉಳಿದ 26 ಜನ ದೇಶದ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದೆ.

ಇನ್ನೂ 101 ಜನರಿಗೆ ರಾಷ್ಟ್ರಪತಿ ಪದಕ, 85 ಜನ ಪೊಲೀಸ್‌ ಸಿಬ್ಬಂದಿ, 5 ಜನ ಅಗ್ನಿಶಾಮಕ ಸಿಬ್ಬಂದಿ, 7 ನಾಗರೀಕ ಸೇವಾ ಸಿಬ್ಬಂದಿ, ಹೋಮ್‌ಗಾರ್ಡ್‌ಗಳು ಹಾಗೂ 4 ಇತರೆ ಸಿಬ್ಬಂದಿಗಳಿದ್ದಾರೆ. ಜೊತೆಗೆ 746 ಸೇವಾ ಪದಕಗಳ ಪೈಕಿ, 37 ಅಗ್ನಿಶಾಮಕ, 39 ನಾಗರೀಕ ರಕ್ಷಣಾ, 634 ಪೊಲೀಸ್‌, ಹೋಮ್‌ಗಾರ್ಡ್‌ ಹಾಗೂ 36 ಇತರೆ ಸಿಬ್ಬಂದಿಗಳಿಗೆ ವಿತರಿಸಲಾಗುವುದು ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

3 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

4 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

4 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

5 hours ago