ದೇಶ- ವಿದೇಶ

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ

ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನು ಸಿದ್ಧಪಡಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ.

ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ ಚಿತ್ರ
ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ವಿಷಯಾಧಾರಿತ ಸ್ತಬ್ಧ ಚಿತ್ರ ಸಿದ್ಧಪಡಿಸಲಾಗಿತ್ತು. ಮಿಲೆಟ್ಸ್ ಟು ಮೈಕ್ರೋಚಿಪ್ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಹಾಗೂ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಟ್ಯಾಬ್ಲೋದಲ್ಲಿ ನಿರ್ಮಿಸಲಾಗಿತ್ತು.

ಕರ್ನಾಟಕವು ಕೃಷಿ ಕೈಗಾರಿಕೆ, ನಾವೀನ್ಯತೆ ಮತ್ತು ಸಂಸ್ಕ ತಿಯಲ್ಲಿ ಸಮತೋಲಿತ ಪ್ರಗತಿ ಮೂಲಕ ರಾಷ್ಟ್ರವನ್ನು ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದತ್ತ ಕೊಂಡೊಯ್ಯುತ್ತಿದೆ. ಆತ್ಮನಿರ್ಭರ ಭಾರತದ ದೃಷ್ಟಿಗೆ ಕರ್ನಾಟಕ ಸಮಗ್ರ ಕೊಡುಗೆ ನೀಡುತ್ತಿದೆ ಎಂಬುದು ಈ ಸ್ತಬ್ಧಚಿತ್ರದ ಸಂಕೇತವಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಈ ಸ್ತಬ್ಧಚಿತ್ರ ಪ್ರದರ್ಶಿಸುವ ಪ್ರಸ್ತಾಪ ಅಂಗೀಕೃತವಾಗದ ಹಿನ್ನೆಲೆಯಲ್ಲಿ ದಿಲ್ಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ ಎನ್ನುವುದು ದುರದೃಷ್ಟಕರ ಸಂಗತಿ.

ಸರಿಯಾದ ಪತ್ರ ವ್ಯವಹಾರ ನಡೆದಿಲ್ಲ : ಯದುವೀರ್
ಈ ಬಗ್ಗೆ ಮೈಸೂರು ಬಿಜೆಪಿ ಸಂಸದ ಯದುವೀರ್ ಒಡೆಯರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸುತ್ತಿಲ್ಲ. ಸರಿಯಾಗಿ ಪತ್ರ ವ್ಯವಹಾರ ನಡೆದಿಲ್ಲ, ಹಾಗಾಗಿ ಗೊಂದಲ ಆಗಿತ್ತು. ಈ ಬಾರಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ಕಾರಣ ಕೊಟ್ಟಿದ್ದಾರೆ.

ಪ್ರದೀಪ್ ಈಶ್ವರ್ ಆಕ್ರೋಶ
ಕರ್ನಾಟಕದ ಪ್ರತಿಯೊಬ್ಬ ಮತದಾರು ಸೂಕ್ಷ್ಮವಾಗಿ ಯೋಚಿಸಬೇಕು. ಬಿಜೆಪಿಗೆ ಮತ ಹಾಕಿದವರು ಯೋಚನೆ ಮಾಡಿ. ನಾಲಾಯಕ್ ಸಂಸದರು ನೋಡಬೇಕಿದೆ. ರಾಜ್ಯದ ಪರ ಧ್ವನಿ ಎತ್ತದ ಸಂಸದರೇ ನೋಡಿ. ದಿಲ್ಲಿ ಪರೇಡ್‌ನಲ್ಲಿ 30 ಟ್ಯಾಬ್ಲೋಗಳಿಗೆ ಅವಕಾಶ ನೀಡಲಾಗಿದೆ. 17 ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಹೋಗುತ್ತವೆ. ಕೇರಳದ ಟ್ಯಾಬ್ಲೋ ಹೋಗ್ತಿದೆ. ಯಾಕಂದ್ರೆ ಚುನಾವಣೆ ಇದೆ. ತಮಿಳುನಾಡಿನಲ್ಲಿ ಚುನಾವಣೆ ಇದೆ ಅದರದ್ದು ಸಹ ಹೋಗುತ್ತಿದೆ. ಪುದುಚೇರಿಯಲ್ಲು ಚುನಾವಣೆ ಇದೆ. ಅಲ್ಲಿ ಚುನಾವಣೆಗಳು ಇರುವುದಿರಂದ ಈ ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ನೀಡಲಾಗಿದೆ. ಆದರೆ ನಮ್ಮ ಟ್ಯಾಬ್ಲೋಗೆ ಅವಕಾಶ ಸಿಕ್ಕಿಲ್ಲ. ಇದಾ ನೀವು ರಾಜ್ಯಕ್ಕೆಕೊಡುವ ಗೌರವ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

6 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago