Balochistan
ಇಸ್ಲಮಾಬಾದ್ : ಪಾಕಿಸ್ತಾನದಿಂದ ಪ್ರತ್ಯೇಕಗೊಂಡು ರಿಪಬ್ಲಿಕ್ ಆಫ್ ಬಲೂಚಿಸ್ತಾನ್ ರಚನೆಗೊಂಡಿದೆ ಎಂದು ಬಲೂಚಿಸ್ತಾನ ನಾಯಕ ಮೀರ್ ಯಾರ್ ಸೇರಿದಂತೆ ಕೆಲ ನಾಯಕರು ಎಕ್ಸ್ನಲ್ಲಿ ಘೋಷಿಸಿದ್ದು, ಈ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ತುಮ್ ಮಾರೋಗೆ ಹಮ್ ನೆಕ್ಲೆಂಗಿ, ಹಮ್ ನಸಲ್ ಬಚಾನಿ ನೆಕ್ಲಿ ಹೈ, ಆವೋ ಹಮಾರಾ ಸಾಥ್ ದೋ ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನ್ನಾದ್ಯಂತ ಸಾರ್ವಜನಿಕರು ಬೀದಿಗಿಳಿದಿದ್ದಾರೆ. ಇದು ಬಲೂಚಿಸ್ತಾನ್ ಪಾಕಿಸ್ತಾನವಲ್ಲ. ಜಗತ್ತು ಇನ್ನು ಮುಂದೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನ್ಗಳನ್ನು ಪಾಕಿಸ್ತಾನದ ಸ್ವಂತ ಜನರು ಎಂದು ಕರೆಯುವುದನ್ನು ನಿಲ್ಲಿಸುವಂತೆ ಅವರು ಇದೇ ವೇಳೆ ಒತ್ತಾಯಿಸಿದ್ದಾರೆ.
ಮತ್ತೊಂದು ಪೋಸ್ಟ್ನಲ್ಲಿ, ಅವರು ಹೇ ನಾ-ಪಾಕಿಸ್ತಾನ್. ನಿಮ್ಮ ಬಳಿ ಸೈನ್ಯವಿದ್ದರೆ, ನಾವು ಬಲೂಚ್ನ ಸ್ವತಂತ್ರ ಯೋಧರಿದ್ದಾರೆ. ಈ ಯೋಧರು ನಿಮ್ಮ ವಿರುದ್ಧ ಹೋರಾಟ ಮಾಡುತ್ತಾರೆ ಎಂದು ಎಚ್ಚರಿಕೆಯ ಬರಹ ಪೋಸ್ಟ್ ಮಾಡಿದ್ದಾರೆ. ಇತ್ತೀಚಿನ ಗಡಿಯಾಚೆಗಿನ ಮಿಲಿಟರಿ ಕಾರ್ಯಾಚರಣೆಗಳ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾದ ನಡುವೆ ಈ ಘೋಷಣೆ ಬಂದಿದೆ.
ಅಲ್ಲದೇ ಹೊಸದಿಲ್ಲಿಯಲ್ಲಿ ಬಲೂಚಿಸ್ತಾನದ ರಾಯಭಾರ ಕಚೇರಿಗೆ ಅವಕಾಶ ನೀಡುವಂತೆ ಅವರು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪಾಕಿಸ್ತಾನಿ ಸೈನ್ಯವನ್ನು ಬಲೂಚಿಸ್ತಾನದಿಂದ ಕಳುಹಿಸಿ, ಶಾಂತಿಪಾಲನಾ ಪಡೆಗಳನ್ನು ಕಳುಹಿಸುವಂತೆ ವಿಶ್ವಸಂಸ್ಥೆಯನ್ನು ಒತ್ತಾಯಿಸಿದ್ದಾರೆ.
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…