ದೇಶ- ವಿದೇಶ

ಮತ್ತೊಂದು ಆಘಾತ ; ಪಾಕ್‌ ಪತನ ಶೀಘ್ರ ; ಬಲೂಚಿಸ್ತಾನ ಉದಯ

ಇಸ್ಲಮಾಬಾದ್‌ : ಪಾಕಿಸ್ತಾನದಿಂದ ಪ್ರತ್ಯೇಕಗೊಂಡು ರಿಪಬ್ಲಿಕ್‌ ಆಫ್‌ ಬಲೂಚಿಸ್ತಾನ್‌ ರಚನೆಗೊಂಡಿದೆ ಎಂದು ಬಲೂಚಿಸ್ತಾನ ನಾಯಕ ಮೀರ್‌ ಯಾರ್‌ ಸೇರಿದಂತೆ ಕೆಲ ನಾಯಕರು ಎಕ್ಸ್‌ನಲ್ಲಿ ಘೋಷಿಸಿದ್ದು, ಈ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ತುಮ್ ಮಾರೋಗೆ ಹಮ್ ನೆಕ್ಲೆಂಗಿ, ಹಮ್ ನಸಲ್ ಬಚಾನಿ ನೆಕ್ಲಿ ಹೈ, ಆವೋ ಹಮಾರಾ ಸಾಥ್ ದೋ ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನ್‍ನಾದ್ಯಂತ ಸಾರ್ವಜನಿಕರು ಬೀದಿಗಿಳಿದಿದ್ದಾರೆ. ಇದು ಬಲೂಚಿಸ್ತಾನ್ ಪಾಕಿಸ್ತಾನವಲ್ಲ. ಜಗತ್ತು ಇನ್ನು ಮುಂದೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್‍ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನ್‍ಗಳನ್ನು ಪಾಕಿಸ್ತಾನದ ಸ್ವಂತ ಜನರು ಎಂದು ಕರೆಯುವುದನ್ನು ನಿಲ್ಲಿಸುವಂತೆ ಅವರು ಇದೇ ವೇಳೆ ಒತ್ತಾಯಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಅವರು ಹೇ ನಾ-ಪಾಕಿಸ್ತಾನ್. ನಿಮ್ಮ ಬಳಿ ಸೈನ್ಯವಿದ್ದರೆ, ನಾವು ಬಲೂಚ್‍ನ ಸ್ವತಂತ್ರ ಯೋಧರಿದ್ದಾರೆ. ಈ ಯೋಧರು ನಿಮ್ಮ ವಿರುದ್ಧ ಹೋರಾಟ ಮಾಡುತ್ತಾರೆ ಎಂದು ಎಚ್ಚರಿಕೆಯ ಬರಹ ಪೋಸ್ಟ್ ಮಾಡಿದ್ದಾರೆ. ಇತ್ತೀಚಿನ ಗಡಿಯಾಚೆಗಿನ ಮಿಲಿಟರಿ ಕಾರ್ಯಾಚರಣೆಗಳ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾದ ನಡುವೆ ಈ ಘೋಷಣೆ ಬಂದಿದೆ.

ಅಲ್ಲದೇ ಹೊಸದಿಲ್ಲಿಯಲ್ಲಿ ಬಲೂಚಿಸ್ತಾನದ ರಾಯಭಾರ ಕಚೇರಿಗೆ ಅವಕಾಶ ನೀಡುವಂತೆ ಅವರು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪಾಕಿಸ್ತಾನಿ ಸೈನ್ಯವನ್ನು ಬಲೂಚಿಸ್ತಾನದಿಂದ ಕಳುಹಿಸಿ, ಶಾಂತಿಪಾಲನಾ ಪಡೆಗಳನ್ನು ಕಳುಹಿಸುವಂತೆ ವಿಶ್ವಸಂಸ್ಥೆಯನ್ನು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

7 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

8 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

9 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago