ನವದೆಹಲಿ: ಭ್ರಷ್ಟಾಚಾರ ಹಗರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣ ಪತ್ರ ನೀಡಬೇಕು. ಆಗ ಮಾತ್ರ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದರು.
ದೆಹಲಿ ಚುನಾವಣೆ 2025ರ ಫೆಬ್ರವರಿಯಲ್ಲಿ ನಡೆಯಲಿದೆ. ಆದರೆ ಮಹಾರಾಷ್ಟ್ರದೊಂದಿಗೆ 2024ರ ನವೆಂಬರ್ನಲ್ಲಿಯೇ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದರು.
ಇನ್ನೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸುತ್ತೇನೆ. ಪಕ್ಷದ ನಾಯಕರೊಬ್ಬರು ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ ಹೇಳಿಕೆ ಕಾರ್ಯಕರ್ತರಲ್ಲಿ ಭಾರೀ ಅಚ್ಚರಿ ಮೂಡಿಸಿದ್ದು, ಯಾರೂ ಸಿಎಂ ಆಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…