ದೇಶ- ವಿದೇಶ

ಪಾಲಿಕೆಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಿ ; ಸಿಎಂಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಹೊಸದಿಲ್ಲಿ : ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆ ತೋರಬೇಕು ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ್ದಾರೆ.

ಪಾಲಿಕೆಗಳ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತುರ್ತು ಗಮನ ಹರಿಸಬೇಕು. ಆದರೆ, ಶಾಸಕರ ಬಂಡಾಯ ತಣಿಸುವುದಕ್ಕೆ,ಕಾಂಗ್ರೆಸ್ ಪಕ್ಷದಲ್ಲಿನ ಬೇಗುದಿಯನ್ನು ಕಡಿಮೆ ಮಾಡಲು ಸಿಎಂ, ಡಿಸಿಎಂ ಅವರಿಗೆ ಸಮಯವೇ ಸಾಲುತ್ತಿಲ್ಲ. ಇದನ್ನು ನಾನು ತಪ್ಪೆನ್ನಲಾರೆ. ಆದರೆ, ಪಾಲಿಕೆ ನೌಕರರು ಎಸಗಿದ ಪಾಪವೇನು? ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಳಂಬ ಧೋರಣೆ ಯಾಕೆ? ಸ್ವತಃ ಮುಖ್ಯಮಂತ್ರಿ ಅವರೇ ಮಾನವೀಯ ನೆಲೆಗಟ್ಟಿನಲ್ಲಿ ತಕ್ಷಣವೇ ಕ್ರಮ ವಹಿಸುತ್ತಿಲ್ಲ, ಏಕೆ? ಹಗಲಿರುಳು ಜನರಿಗಾಗಿ ದುಡಿಯುವ ಅವರ ಬದುಕಿಗೂ ಗ್ಯಾರಂಟಿ ಕೊಡಬೇಕಲ್ಲವೇ? ಎಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.

ಪಾಲಿಕೆಗಳ ನಿತ್ಯದ ಯಾವ ಕೆಲಸ ಕಾರ್ಯಗಳು ನಿಲ್ಲಬಾರದು. ಸ್ವಚ್ಛತೆ, ನೈರ್ಮಲ್ಯ ಹಾಗೂ ಸ್ಥಳೀಯ ಆಡಳಿತದ ದೃಷ್ಟಿಯಿಂದ ಪಾಲಿಕೆಗಳು ಮಹತ್ವ ಹೊಂದಿವೆ ಎಂಬುದನ್ನು ಆಡಳಿತಗಾರರು ಮರೆಯಬಾರದು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

7 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

7 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

7 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

7 hours ago