ದೇಶ- ವಿದೇಶ

ಅವಿವಾಹಿತ ಜೋಡಿಗಳಿಗೆ ನಿರ್ಬಂಧ: ಓಯೊದಿಂದ ಹೊಸ ನಿಯಮ ಜಾರಿ

ನವದೆಹಲಿ: ರಾಷ್ಟ್ರದ ಪ್ರಮುಖ ಟ್ರಾವೆಲ್‌ ಬುಕ್ಕಿಂಗ್‌ ಕಂಪೆನಿ ಓಯೊ ತನ್ನ ಚೆಕ್‌ ಇನ್‌ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಅವಿವಾಹಿತ ಜೋಡಿಗಳಿಗೆ ಅವಕಾಶವಿಲ್ಲ ಎಂದು ಹೇಳಿದೆ.

ಈ ನೂತನ ನಿಯಮ ಸದ್ಯ ಮೀರತ್‌ನಲ್ಲಿ ಈ ನಿಯಮ ಜಾರಿಯಾಗಿದ್ದು, ಹೋಟೆಲ್‌ಗೆ ಬರುವ ಜೋಡಿಗಳು ಕಡ್ಡಾಯವಾಗಿ ತಮ್ಮ ಸಂಬಂಧದ ಪುರಾವೆಯನ್ನು ಒದಗಿಸಬೇಕು. ಅಲ್ಲದೇ ಆನ್‌ಲೈನ್‌ ಬುಕ್ಕಿಂಗ್‌ಗೂ ಈ ನಿಯಮ ಅಳವಡಿಕೆಯಾಗಲಿದೆ ಎಂದು ತಿಳಿಸಿದೆ.

ಓಯೊ ಕಂಪೆನಿ ತನ್ನ ಎಲ್ಲಾ ಪಾಲುದಾರ ಹೋಟೆಲ್‌ಗಳಿಗೆ ಈ ಮಾಹಿತಿಯನ್ನು ರವಾನಿಸಿದೆ. ತಕ್ಷಣವೇ ಇದನ್ನು ಜಾರಿಗೆ ತರಬೇಕು ಎಂದು ಮೀರತ್‌ನ ಪಾಲುದಾರ ಹೋಟೆಲ್‌ಗಳಿಗೆ ಕಂಪೆನಿ ಸೂಚನೆ ನೀಡಿದೆ. ಹೀಗಾಗಿ ಓಯೊ ಸುರಕ್ಷಿತ ಹಾಗೂ ಜವಾಬ್ದಾರಿಯುತ ಅತಿಥ್ಯ ಪದ್ಧತಿಗಳನ್ನು ಎತ್ತಿ ಹಿಡಿಯಲಾಗಿದೆ ಎಂದು ಹೇಳಿದೆ.

ಸ್ಥಳಿಯ ಸಾಮಾಜಿಕ ಸಂವೇದನೆಯನ್ನು ಗೌರವಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದು, ಆಯಾಯ ನಗರದ ಪ್ರತಿಕ್ರಿಯೆ ಪಡೆದು ಬೇರೆ ಸ್ಥಳಗಳಿಗೂ ಈ ನಿಯಮವನ್ನು ವಿಸ್ತರಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಅಧಿಕಾರಿ ಮೂಲಗಳು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

6 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

6 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

7 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

7 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

7 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

8 hours ago